ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ.
ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಅವರುಗಳನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಬಂಧಿಸಿದೆ.
ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್ನಲ್ಲಿ ನಟಿ ಸೇರಿದಂತೆ ಇತರರ ಬಂಧನವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಲಸರವಕ್ಕಂ ಎಂಬಲ್ಲಿ 33 ವರ್ಷದ ವಿಘ್ನೆಶ್ವರನ್ ಎಂಬಾತನನ್ನು ಪೊಲೀಸ್ ಬಂಧಿಸಿದ್ದರು. ಆತನ ವಿಚಾರಣೆ ಮಾಡಿದಾಗ ಆತ ವೆಂಕಟೇಶ್ ಹೆಸರಿನ ವ್ಯಕ್ತಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿರುವ ಅಂಶ ತಿಳಿದು ಬಂತು. ಬಳಿಕ ವೆಂಕಟೇಶ್ ಎಂಬಾತನನ್ನು ಪೊಲೀಸರು ಗ್ರಾಹಕನ ರೀತಿ ಸಂಪರ್ಕ ಮಾಡಿ, ಡ್ರಗ್ಸ್ ಮಾರುವಂತೆ ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಬಂದಾಗ ಆತನನ್ನು ಬಂಧಿಸಿ, ಆತನಿಂದ ಆರು ಗ್ರಾಂ ಮೆಥಾಫೆಟಮೈನ್, ಏಳು ಗ್ರಾಂ ಓಜಿ ಗಾಂಜಾ, ಹದಿನೈದು ಗ್ರಾಂ ಗಾಂಜಾ, ಸ್ಮೊಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು ಒಂಬತ್ತು ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ.
ಆತನ ಮಾಹಿತಿಯ ಮೇರೆಗೆ ಪೊಲೀಸರು ಇತರೆ ಕೆಲವರನ್ನು ಬಂಧಿಸಿದ್ದು, ಈ ವೇಳೆ, ನಟಿ ಅಂಜು ಕೃಷ್ಣ ಮತ್ತು ಸಹಾಯಕಿ ನಿರ್ದೇಶಕಿ ವಿನ್ಸಿ ನಿವೇತಾ ಅನ್ನು ಸಹ ಬಂಧಿಸಲಾಗಿದೆ. ಅಂಜು ಕೃಷ್ಣ ತಮಿಳಿನ ವೆಲ್ಲಿಮಲೈ ಮಲಯಾಳಂನ ಆರೊ, ಆಕಾಶಂ ಕದನ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಎಲ್ಲ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…