erth quick
ಕಾಬೂಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೂ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ.
ಭೂಕಂಪವು ಆಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಅವರು ಆಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮಾತನಾಡಿ, ದುರಂತದಲ್ಲಿ ನಾಗರಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಆಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ತಿಳಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಆಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…