ಮುಂಬೈ: ನಗರದ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಹತ್ತುವ ವೇಳೆ ಪ್ರಯಾಣಿಕರ ಮಧ್ಯೆ ನೂಕು ನುಗ್ಗಲು ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ಬೆಳಗ್ಗಿನ ಜಾವ 5.56 ಗಂಟೆಗೆ ಬಾಂದ್ರಾ ಟರ್ಮಿನಸ್ ಫ್ಲಾಟ್ಫಾರ್ಮ್ ನಂ.1 ರಲ್ಲಿ ನಡೆದಿದೆ. ರೈಲು ಸಂಖ್ಯೆ 22921 ಬಾಂದ್ರಾ-ಗೋರಖ್ಪುರ ಎಕ್ಸ್ಪ್ರೆಸ್ ಅನ್ನು ಹತ್ತುವ ವೇಳೆ ವಿಪರೀತ ಜನಸಂಖ್ಯೆಯಿಂದ ಈ ಸನ್ನಿವೇಶ ಉದ್ಭವಿಸಿದೆ ಎಂದು ಬೃಹತ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕಾರಿ ಹೇಳಿದ್ದಾರೆ.
ಈ ಸ್ಥಳದಲ್ಲಿ ಗಾಯಗೊಂಡ 9 ಮಂದಿಯನ್ನು ಭಾಭಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಗಳನ್ನು ದಿವ್ಯಾಂಶು ಯೋಗೇಂದ್ರ ಯಾದವ್(18), ಶಭೀರ್ ಅಬ್ದುಲ್ ರೆಹಮಾನ್(40), ಪರಮೇಶ್ವರ ಸುಖದರ್ ಗುಪ್ತಾ(28), ರವೀಂದ್ರ ಹರಿಹರ ಚುಮಾ(30), ರಾಮಸೇವಕ ರವೀಂದ್ರ ಪ್ರಸಾದ್ ಪ್ರಜಾಪತಿ(29), ಸಂಜಯ್ ತಿಲಕ್ರಂ ಕಾಂಗೇ(27), ಶರೀಫ್ ಶೇಖ್(25), ಇಂದ್ರಜಿತ್ ಸಹಾನಿ(19), ನೂರ್ ಮೊಹಮ್ಮದ್ ಶೇಖ್(18) ಹಾಗೂ ಮೊಹಮ್ಮದ್ ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…