ಮುಂಬೈ: ನಗರದ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಹತ್ತುವ ವೇಳೆ ಪ್ರಯಾಣಿಕರ ಮಧ್ಯೆ ನೂಕು ನುಗ್ಗಲು ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ಬೆಳಗ್ಗಿನ ಜಾವ 5.56 ಗಂಟೆಗೆ ಬಾಂದ್ರಾ ಟರ್ಮಿನಸ್ ಫ್ಲಾಟ್ಫಾರ್ಮ್ ನಂ.1 ರಲ್ಲಿ ನಡೆದಿದೆ. ರೈಲು ಸಂಖ್ಯೆ 22921 ಬಾಂದ್ರಾ-ಗೋರಖ್ಪುರ ಎಕ್ಸ್ಪ್ರೆಸ್ ಅನ್ನು ಹತ್ತುವ ವೇಳೆ ವಿಪರೀತ ಜನಸಂಖ್ಯೆಯಿಂದ ಈ ಸನ್ನಿವೇಶ ಉದ್ಭವಿಸಿದೆ ಎಂದು ಬೃಹತ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕಾರಿ ಹೇಳಿದ್ದಾರೆ.
ಈ ಸ್ಥಳದಲ್ಲಿ ಗಾಯಗೊಂಡ 9 ಮಂದಿಯನ್ನು ಭಾಭಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಗಳನ್ನು ದಿವ್ಯಾಂಶು ಯೋಗೇಂದ್ರ ಯಾದವ್(18), ಶಭೀರ್ ಅಬ್ದುಲ್ ರೆಹಮಾನ್(40), ಪರಮೇಶ್ವರ ಸುಖದರ್ ಗುಪ್ತಾ(28), ರವೀಂದ್ರ ಹರಿಹರ ಚುಮಾ(30), ರಾಮಸೇವಕ ರವೀಂದ್ರ ಪ್ರಸಾದ್ ಪ್ರಜಾಪತಿ(29), ಸಂಜಯ್ ತಿಲಕ್ರಂ ಕಾಂಗೇ(27), ಶರೀಫ್ ಶೇಖ್(25), ಇಂದ್ರಜಿತ್ ಸಹಾನಿ(19), ನೂರ್ ಮೊಹಮ್ಮದ್ ಶೇಖ್(18) ಹಾಗೂ ಮೊಹಮ್ಮದ್ ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…