ಮುಂಬೈ: ನಗರದ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಹತ್ತುವ ವೇಳೆ ಪ್ರಯಾಣಿಕರ ಮಧ್ಯೆ ನೂಕು ನುಗ್ಗಲು ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ಬೆಳಗ್ಗಿನ ಜಾವ 5.56 ಗಂಟೆಗೆ ಬಾಂದ್ರಾ ಟರ್ಮಿನಸ್ ಫ್ಲಾಟ್ಫಾರ್ಮ್ ನಂ.1 ರಲ್ಲಿ ನಡೆದಿದೆ. ರೈಲು ಸಂಖ್ಯೆ 22921 ಬಾಂದ್ರಾ-ಗೋರಖ್ಪುರ ಎಕ್ಸ್ಪ್ರೆಸ್ ಅನ್ನು ಹತ್ತುವ ವೇಳೆ ವಿಪರೀತ ಜನಸಂಖ್ಯೆಯಿಂದ ಈ ಸನ್ನಿವೇಶ ಉದ್ಭವಿಸಿದೆ ಎಂದು ಬೃಹತ್ ಮುಂಬೈ ಮುನ್ಸಿಪಾಲ್ ಕಾರ್ಪೋರೇಷನ್ ಅಧಿಕಾರಿ ಹೇಳಿದ್ದಾರೆ.
ಈ ಸ್ಥಳದಲ್ಲಿ ಗಾಯಗೊಂಡ 9 ಮಂದಿಯನ್ನು ಭಾಭಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಗಳನ್ನು ದಿವ್ಯಾಂಶು ಯೋಗೇಂದ್ರ ಯಾದವ್(18), ಶಭೀರ್ ಅಬ್ದುಲ್ ರೆಹಮಾನ್(40), ಪರಮೇಶ್ವರ ಸುಖದರ್ ಗುಪ್ತಾ(28), ರವೀಂದ್ರ ಹರಿಹರ ಚುಮಾ(30), ರಾಮಸೇವಕ ರವೀಂದ್ರ ಪ್ರಸಾದ್ ಪ್ರಜಾಪತಿ(29), ಸಂಜಯ್ ತಿಲಕ್ರಂ ಕಾಂಗೇ(27), ಶರೀಫ್ ಶೇಖ್(25), ಇಂದ್ರಜಿತ್ ಸಹಾನಿ(19), ನೂರ್ ಮೊಹಮ್ಮದ್ ಶೇಖ್(18) ಹಾಗೂ ಮೊಹಮ್ಮದ್ ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…