ದೇಶ- ವಿದೇಶ

ಬಾಂದ್ರಾ ರೈಲು ನಿಲ್ದಾಣದಲ್ಲಿ ನೂಕು ನುಗ್ಗಲಿನಿಂದ 9 ಮಂದಿಗೆ ಗಾಯ

ಮುಂಬೈ: ನಗರದ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ರೈಲು ಹತ್ತುವ ವೇಳೆ ಪ್ರಯಾಣಿಕರ ಮಧ್ಯೆ ನೂಕು ನುಗ್ಗಲು ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಬೆಳಗ್ಗಿನ ಜಾವ 5.56 ಗಂಟೆಗೆ ಬಾಂದ್ರಾ ಟರ್ಮಿನಸ್‌ ಫ್ಲಾಟ್‌ಫಾರ್ಮ್‌ ನಂ.1 ರಲ್ಲಿ ನಡೆದಿದೆ. ರೈಲು ಸಂಖ್ಯೆ 22921 ಬಾಂದ್ರಾ-ಗೋರಖ್‌ಪುರ ಎಕ್ಸ್‌ಪ್ರೆಸ್‌ ಅನ್ನು ಹತ್ತುವ ವೇಳೆ ವಿಪರೀತ ಜನಸಂಖ್ಯೆಯಿಂದ ಈ ಸನ್ನಿವೇಶ ಉದ್ಭವಿಸಿದೆ ಎಂದು ಬೃಹತ್‌ ಮುಂಬೈ ಮುನ್ಸಿಪಾಲ್‌ ಕಾರ್ಪೋರೇಷನ್‌ ಅಧಿಕಾರಿ ಹೇಳಿದ್ದಾರೆ.

ಈ ಸ್ಥಳದಲ್ಲಿ ಗಾಯಗೊಂಡ 9 ಮಂದಿಯನ್ನು ಭಾಭಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗಾಯಗೊಂಡ ವ್ಯಕ್ತಿಗಳನ್ನು ದಿವ್ಯಾಂಶು ಯೋಗೇಂದ್ರ ಯಾದವ್‌(18), ಶಭೀರ್‌ ಅಬ್ದುಲ್‌ ರೆಹಮಾನ್‌(40), ಪರಮೇಶ್ವರ ಸುಖದರ್‌ ಗುಪ್ತಾ(28), ರವೀಂದ್ರ ಹರಿಹರ ಚುಮಾ(30), ರಾಮಸೇವಕ ರವೀಂದ್ರ ಪ್ರಸಾದ್‌ ಪ್ರಜಾಪತಿ(29), ಸಂಜಯ್‌ ತಿಲಕ್ರಂ ಕಾಂಗೇ(27), ಶರೀಫ್‌ ಶೇಖ್‌(25), ಇಂದ್ರಜಿತ್‌ ಸಹಾನಿ(19), ನೂರ್‌ ಮೊಹಮ್ಮದ್‌ ಶೇಖ್‌(18) ಹಾಗೂ ಮೊಹಮ್ಮದ್‌ ಎಂದು ಗುರುತಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 mins ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

1 hour ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

3 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

9 hours ago