ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ.
ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚುತುರ್ವೇದಿ ಅವರು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ ಅವರಿಗೆ ಕರೆ ಮಾಡಿ ಬಿಹಾರದಿಂದ ಅಪ್ರಾಪ್ತ ಮಕ್ಕಳನ್ನು ಅಕ್ರಮವಾಗಿ ಸಹರಾನ್ಪುರಕ್ಕೆ ಸಾಗಿಸಲಾಗುತ್ತಿದ್ದು, ಸದ್ಯ ಅವರನ್ನು ಗೋರಖ್ಪುರದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಸರ್ವೇಶ್ ಅವಸ್ತಿ ಆಯೋಧ್ಯೆಯಲ್ಲಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರಾಗಿದ್ದಾರೆ. ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದಾರೆಂದು ತಿಳಿದಿಲ್ಲ. ಪೋಷಕರನ್ನು ಸಂಪರ್ಕಿಸಿ ಮಕ್ಕಳನ್ನು ಒಪ್ಪಿಸಲಾಗುವುದು ಎಂದು ಮಕ್ಕಳ ಕಲ್ಯಾಣ ಆಯೋಗದ ಸದಸ್ಯರು ತಿಳಿಸಿದ್ದಾರೆ.
ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಇಂತಹ ಮಕ್ಕಳ ಕಳ್ಳ ಸಾಗಣಿಕೆಯು ಹೆಚ್ಚುತ್ತಿದ್ದು, ಅಲ್ಲಿ ಸರ್ಕಾರಗಳು ಇದರ ಬಗ್ಗೆ ಗಮನಹರಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…