ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ.
ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚುತುರ್ವೇದಿ ಅವರು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ ಅವಸ್ತಿ ಅವರಿಗೆ ಕರೆ ಮಾಡಿ ಬಿಹಾರದಿಂದ ಅಪ್ರಾಪ್ತ ಮಕ್ಕಳನ್ನು ಅಕ್ರಮವಾಗಿ ಸಹರಾನ್ಪುರಕ್ಕೆ ಸಾಗಿಸಲಾಗುತ್ತಿದ್ದು, ಸದ್ಯ ಅವರನ್ನು ಗೋರಖ್ಪುರದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಸರ್ವೇಶ್ ಅವಸ್ತಿ ಆಯೋಧ್ಯೆಯಲ್ಲಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಕ್ಷಿಸಲ್ಪಟ್ಟ ಮಕ್ಕಳು 4-12 ವರ್ಷದೊಳಗಿನವರಾಗಿದ್ದಾರೆ. ಮಕ್ಕಳನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದಾರೆಂದು ತಿಳಿದಿಲ್ಲ. ಪೋಷಕರನ್ನು ಸಂಪರ್ಕಿಸಿ ಮಕ್ಕಳನ್ನು ಒಪ್ಪಿಸಲಾಗುವುದು ಎಂದು ಮಕ್ಕಳ ಕಲ್ಯಾಣ ಆಯೋಗದ ಸದಸ್ಯರು ತಿಳಿಸಿದ್ದಾರೆ.
ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಇಂತಹ ಮಕ್ಕಳ ಕಳ್ಳ ಸಾಗಣಿಕೆಯು ಹೆಚ್ಚುತ್ತಿದ್ದು, ಅಲ್ಲಿ ಸರ್ಕಾರಗಳು ಇದರ ಬಗ್ಗೆ ಗಮನಹರಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…