a big shock for pakistan from indian government
ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್ಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ.
ಜಲ ಒಪ್ಪಂದ ತಡೆ ಹಿಡಿದಿದ್ದರೂ ನೀರಿನ ತಡೆಗೆ ಭಾರತದ ಬಳಿ ಯಾವುದೇ ಸೌಕರ್ಯ ಇಲ್ಲ. ಹೀಗಾಗಿ ಭಾರತ ಹೊಸ ಡ್ಯಾಂ ಅನ್ನು ಚೆನಾಬ್ ನದಿಗೆ ನಿರ್ಮಿಸಲು ಮುಂದಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಿತ್ವಾರ್ನಲ್ಲಿ ಚೆನಾಬ್ ನದಿಗೆ ಕ್ವಾರ್ ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ವೇಗ ನೀಡುತ್ತಿದೆ. ಇದಕ್ಕಾಗಿ 3,119 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ.
ಇದು ಗ್ರೀನ್ಫೀಲ್ಡ್ ಅಣೆಕಟ್ಟಾಗಿದ್ದು, ಕಳೆದ ವರ್ಷ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈಗ ಇದರ ನಿರ್ಮಾಣಕ್ಕೆ ಮೋದಿ ಸರ್ಕಾರ ವೇಗ ನೀಡಿದ್ದು, ಮುಂದಿನ ವರ್ಷದೊತ್ತಿಗೆ ನಿರ್ಮಾಣ ಕಾರ್ಯ ಮುಕ್ತಾಯವಾಗಲಿದೆ. ಇದರಿಂದ ಪಾಕಿಸ್ತಾನಕ್ಕೆ ಹೋಗುತ್ತಿದ್ದ ನೀರಿನ ಹರಿವಿನ ಮೇಲೆ ಭಾರೀ ಪರಿಣಾಮ ಬೀರಲಿದೆ. ಇದು ಪಾಕಿಸ್ತಾನಕ್ಕೆ ಜಲಸಂಕಷ್ಟ ಸೃಷ್ಟಿಸಲಿದೆ.
ಏಪ್ರಿಲ್ 22ರ ಪಹಲ್ಗಾಮ್ ದಾಳಿ ಬಳಿಕ ಭಾರತ ಪಾಕಿಸ್ತಾನದ ಮೇಲೆ ಜಲ ಬಾಂಬ್ ಹಾಕಿತ್ತು. ಅಂದ್ರೆ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಶಾಕ್ ನೀಡಿತ್ತು. ಇದಕ್ಕೆ ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಒಂದು ಹೆಜ್ಜೆ ಮುಂದಿಟ್ಟಿರುವ ಮೋದಿ ಸರ್ಕಾರ ಹೊಸ ಡ್ಯಾಂ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಮುಂದಾಗಿದೆ. ಚೆನಾಬ್ ನದಿಗೆ ಕ್ವಾರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಭಾರತ ರೂಪಿಸಿದೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…