ದೇಶ- ವಿದೇಶ

ಪಾಕ್‌ಗೆ ಮತ್ತೊಂದು ಶಾಕ್‌ ಕೊಡಲು ಮುಂದಾದ ಭಾರತ ಸರ್ಕಾರ: ಏನದು ಗೊತ್ತಾ?

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್‍ಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ.

ಜಲ ಒಪ್ಪಂದ ತಡೆ ಹಿಡಿದಿದ್ದರೂ ನೀರಿನ ತಡೆಗೆ ಭಾರತದ ಬಳಿ ಯಾವುದೇ ಸೌಕರ್ಯ ಇಲ್ಲ. ಹೀಗಾಗಿ ಭಾರತ ಹೊಸ ಡ್ಯಾಂ ಅನ್ನು ಚೆನಾಬ್ ನದಿಗೆ ನಿರ್ಮಿಸಲು ಮುಂದಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಿತ್ವಾರ್‌ನಲ್ಲಿ ಚೆನಾಬ್ ನದಿಗೆ ಕ್ವಾರ್ ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ವೇಗ ನೀಡುತ್ತಿದೆ. ಇದಕ್ಕಾಗಿ 3,119 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ.

ಇದು ಗ್ರೀನ್‍ಫೀಲ್ಡ್ ಅಣೆಕಟ್ಟಾಗಿದ್ದು, ಕಳೆದ ವರ್ಷ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈಗ ಇದರ ನಿರ್ಮಾಣಕ್ಕೆ ಮೋದಿ ಸರ್ಕಾರ ವೇಗ ನೀಡಿದ್ದು, ಮುಂದಿನ ವರ್ಷದೊತ್ತಿಗೆ ನಿರ್ಮಾಣ ಕಾರ್ಯ ಮುಕ್ತಾಯವಾಗಲಿದೆ. ಇದರಿಂದ ಪಾಕಿಸ್ತಾನಕ್ಕೆ ಹೋಗುತ್ತಿದ್ದ ನೀರಿನ ಹರಿವಿನ ಮೇಲೆ ಭಾರೀ ಪರಿಣಾಮ ಬೀರಲಿದೆ. ಇದು ಪಾಕಿಸ್ತಾನಕ್ಕೆ ಜಲಸಂಕಷ್ಟ ಸೃಷ್ಟಿಸಲಿದೆ.‌

ಏಪ್ರಿಲ್ 22ರ ಪಹಲ್ಗಾಮ್ ದಾಳಿ ಬಳಿಕ ಭಾರತ ಪಾಕಿಸ್ತಾನದ ಮೇಲೆ ಜಲ ಬಾಂಬ್ ಹಾಕಿತ್ತು. ಅಂದ್ರೆ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಶಾಕ್ ನೀಡಿತ್ತು. ಇದಕ್ಕೆ ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಒಂದು ಹೆಜ್ಜೆ ಮುಂದಿಟ್ಟಿರುವ ಮೋದಿ ಸರ್ಕಾರ ಹೊಸ ಡ್ಯಾಂ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಮುಂದಾಗಿದೆ. ಚೆನಾಬ್ ನದಿಗೆ ಕ್ವಾರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಭಾರತ ರೂಪಿಸಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago