ದೇಶ- ವಿದೇಶ

ಪಾಕ್‌ಗೆ ಮತ್ತೊಂದು ಶಾಕ್‌ ಕೊಡಲು ಮುಂದಾದ ಭಾರತ ಸರ್ಕಾರ: ಏನದು ಗೊತ್ತಾ?

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್‍ಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ.

ಜಲ ಒಪ್ಪಂದ ತಡೆ ಹಿಡಿದಿದ್ದರೂ ನೀರಿನ ತಡೆಗೆ ಭಾರತದ ಬಳಿ ಯಾವುದೇ ಸೌಕರ್ಯ ಇಲ್ಲ. ಹೀಗಾಗಿ ಭಾರತ ಹೊಸ ಡ್ಯಾಂ ಅನ್ನು ಚೆನಾಬ್ ನದಿಗೆ ನಿರ್ಮಿಸಲು ಮುಂದಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಿತ್ವಾರ್‌ನಲ್ಲಿ ಚೆನಾಬ್ ನದಿಗೆ ಕ್ವಾರ್ ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ವೇಗ ನೀಡುತ್ತಿದೆ. ಇದಕ್ಕಾಗಿ 3,119 ಕೋಟಿ ರೂ. ಸಾಲ ಪಡೆಯಲು ಮುಂದಾಗಿದೆ.

ಇದು ಗ್ರೀನ್‍ಫೀಲ್ಡ್ ಅಣೆಕಟ್ಟಾಗಿದ್ದು, ಕಳೆದ ವರ್ಷ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈಗ ಇದರ ನಿರ್ಮಾಣಕ್ಕೆ ಮೋದಿ ಸರ್ಕಾರ ವೇಗ ನೀಡಿದ್ದು, ಮುಂದಿನ ವರ್ಷದೊತ್ತಿಗೆ ನಿರ್ಮಾಣ ಕಾರ್ಯ ಮುಕ್ತಾಯವಾಗಲಿದೆ. ಇದರಿಂದ ಪಾಕಿಸ್ತಾನಕ್ಕೆ ಹೋಗುತ್ತಿದ್ದ ನೀರಿನ ಹರಿವಿನ ಮೇಲೆ ಭಾರೀ ಪರಿಣಾಮ ಬೀರಲಿದೆ. ಇದು ಪಾಕಿಸ್ತಾನಕ್ಕೆ ಜಲಸಂಕಷ್ಟ ಸೃಷ್ಟಿಸಲಿದೆ.‌

ಏಪ್ರಿಲ್ 22ರ ಪಹಲ್ಗಾಮ್ ದಾಳಿ ಬಳಿಕ ಭಾರತ ಪಾಕಿಸ್ತಾನದ ಮೇಲೆ ಜಲ ಬಾಂಬ್ ಹಾಕಿತ್ತು. ಅಂದ್ರೆ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸುವ ಮೂಲಕ ಪಾಕಿಸ್ತಾನಕ್ಕೆ ಶಾಕ್ ನೀಡಿತ್ತು. ಇದಕ್ಕೆ ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಒಂದು ಹೆಜ್ಜೆ ಮುಂದಿಟ್ಟಿರುವ ಮೋದಿ ಸರ್ಕಾರ ಹೊಸ ಡ್ಯಾಂ ನಿರ್ಮಾಣ ಕಾರ್ಯಕ್ಕೆ ವೇಗ ನೀಡಲು ಮುಂದಾಗಿದೆ. ಚೆನಾಬ್ ನದಿಗೆ ಕ್ವಾರ್ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಭಾರತ ರೂಪಿಸಿದೆ.

ಆಂದೋಲನ ಡೆಸ್ಕ್

Recent Posts

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

6 mins ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

13 mins ago

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

48 mins ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

1 hour ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

2 hours ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

3 hours ago