ದೇಶ- ವಿದೇಶ

ಭದ್ರತಾ ಸಿಬ್ಬಂದಿ ವಾಹನದ ಮೇಲೆ ಬಾಂಬ್ ಸ್ಫೋಟ: 9 ಮಂದಿ ದುರ್ಮರಣ

ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8 ಮಂದಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಛತ್ತೀಸ್‌ಗಢ್‌ ಬೀಜಾಪುರ್‌ ಜಿಲ್ಲೆಯ ಬೇದ್ರೆ-ಕುತ್ರು ರಸ್ತೆಯಲ್ಲಿ ಭದ್ರತೆ ಪಡೆಯ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ.

ಒಂದು ದಿನದ ಹಿಂದೆಯಷ್ಟೇ ಛತ್ತೀಸ್‌ಗಢದ ಬಸ್ತಾರ್‌ ಪ್ರದೇಶದಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹಾಗೂ ಒಬ್ಬ ಹೆಡ್‌ ಕಾನ್ಸ್‌ಟೇಬಲ್‌ ಮೃತಪಟ್ಟಿದ್ದರು.

ಗುಂಡಿನ ದಾಳಿ ನಡೆಸಿದ ಬಳಿಕ ನಾಲ್ವರು ನಕ್ಸಲರ ಮೃತದೇಹ ಮತ್ತು AK-47 ರೈಫಲ್‌ ಹಾಗೂ ಸ್ವಯಂ ಲೋಡಿಂಗ್‌ ರೈಫಲ್‌ (SLR) ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಾದ ಒಂದು ದಿನದ ನಂತರ ನಕ್ಸಲರು ಪ್ರತಿದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಹನೂರು: ಕಾಡುಹಂದಿ ದಾಳಿ: ಮುಸುಕಿನ ಜೋಳ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಎಂಟಿ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಬೆಳೆದಿದ್ದ ಮುಸುಕಿನ ಜೋಳವನ್ನು…

1 hour ago

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ…

2 hours ago

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

3 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

3 hours ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

4 hours ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

5 hours ago