ದೇಶ- ವಿದೇಶ

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ.

ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.

ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್‌ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು.

ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ ಸಂಘದ ಸದಸ್ಯರಾದ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದು ಶ್ರೀವಿದ್ಯಾ ತಿಳಿಸಿದ್ದಾರೆ.

ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿ, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

7 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

7 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

7 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

12 hours ago