independeny day delhi
ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ.
ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.
ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.
ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು.
ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ ಸಂಘದ ಸದಸ್ಯರಾದ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದು ಶ್ರೀವಿದ್ಯಾ ತಿಳಿಸಿದ್ದಾರೆ.
ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿ, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…