ದೇಶ- ವಿದೇಶ

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ.

ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ ಸಂಬಂಧ ದಂಪತಿಗೆ ಅಧಿಕಾರಿಗಳು ಆಮಂತ್ರಣ ಪತ್ರಿಕೆಯನ್ನ ನೀಡಿದ್ದಾರೆ.

ಸಂಜೀವಿನಿ ಯೋಜನೆಯಡಿಯಲ್ಲಿ ನಡೆಯುವ ಸರಸ್‌ ಮೇಳಗಳಲ್ಲಿ ಭಾಗವಹಿಸಿದ್ದ ಈ ದಂಪತಿ ತಮ್ಮ ಚಿತ್ತಾರ ಕಲೆಯನ್ನು ಪರಿಚಯ ಮಾಡಿಸಿರುವುದಕ್ಕೆ ಈ ಅವಕಾಶ ದೊರಕಿದೆ ಎಂದು ರಾಷ್ಟ್ರೀಯ ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಸರಸ್ವತಿ ಅವರ ಪತಿ ಹಸೆ ಚಿತ್ತಾರ ಕಲಾವಿರ ಈಶ್ವರ ನಾಯ್ಕ ಹಸುವಂತೆ ಅವರಿಗೆ ಪ್ರಸಕ್ತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಲಭಿಸಿತ್ತು.

ನವದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಸ್ವಸಹಾಯ ಸಂಘದ ಸದಸ್ಯರಾದ ಉತ್ತರ ಕನ್ನಡ ಜಿಲ್ಲೆಯ ಚಿತ್ತಾರ ಕಲೆಯ ಕುಶಲಕರ್ಮಿಗಳನ್ನು ಪ್ರತಿನಿಧಿಸುವ ಸರಸ್ವತಿ ಅವರನ್ನು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹೆಮ್ಮೆಯ ವಿಷಯವಾಗಿದೆ ಎಂದು ಶ್ರೀವಿದ್ಯಾ ತಿಳಿಸಿದ್ದಾರೆ.

ಈ ಪ್ರತಿಷ್ಠಿತ ಕಾರ್ಯಕ್ರಮದ ಭಾಗವಾಗಿ, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡುವ ಅವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

6 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

7 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

11 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

11 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

11 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

11 hours ago