ದೇಶ- ವಿದೇಶ

ಬಾಲಿವುಡ್‌ ನಟಿ ಆಲಿಯಾ ಭಟ್‌ ಮನೆ ಸೇರಲಿದೆ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತನೆಯ ಗಣೇಶ ಮೂರ್ತಿ

ಮೈಸೂರು : ಮೈಸೂರಿನ ಪ್ರಸಿದ್ಧ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರ ಕೆತ್ತನೆಯ ಗಣೇಶನ ಮೂರ್ತಿಯೊಂದು ಬಾಲಿವುಡ್ ನಟಿ ಆಲಿಯಾ ಭಟ್ ಮನೆಗೆ ಸೇರಲಿದೆ.

ಹೌದು… ಗಣೇಶನ ಪರಮ ಭಕ್ತೆಯಾದ ಆಲಿಯಾ ಭಟ್ ತಮ್ಮ ಮುಂಬೈ ಮನೆಗೆ ಗಣೇಶನ ಅದ್ಭುತ ವಿಗ್ರಹವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ.

ಇದನ್ನು ಓದಿ: ಜಾಹೀರಾತು ಪೋಸ್ಟ್​​ನೊಂದಿಗೆ ಮಗುವಿನ ಫೋಟೋ ಹಂಚಿಕೊಂಡ್ರಾ ಆಲಿಯಾ ಭಟ್ ?

ಅರುಣ್ ಯೋಗಿರಾಜ್ ಕೆತ್ತಿದ ನಾಲ್ಕು ಅಡಿ ಎತ್ತರದ ಗಣೇಶ ವಿಗ್ರಹವನ್ನು ಸಾಂಪ್ರದಾಯಿಕ ಹೊಯ್ಸಳ ಮತ್ತು ಮೈಸೂರು ಶೈಲಿಯಲ್ಲಿ ಕೆತ್ತಲಾಗಿದೆ. ಪೀಠವು ಮೂರು ಅಡಿ ಎತ್ತರದಲ್ಲಿದೆ. ಈ ವಿಗ್ರಹ ಕೆತ್ತಲು ಸುಮಾರು ಆರು ತಿಂಗಳು ಸಮಯಾವಕಾಶ ತೆಗೆದುಕೊಂಡಿತು, ಯೋಗಿರಾಜ್ ಅವರು ಆಲಿಯಾ ಅವರ ದೃಷ್ಟಿಕೋನಕ್ಕೆ ಸಂಪೂರ್ಣವಾಗಿ ಹೊಂದಿಕೆಯಾಗುವ ಒಂದು ಮೇರುಕೃತಿಯನ್ನು ರಚಿಸಿದ್ದಾರೆ ಎನ್ನಲಾಗಿದೆ.

ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಕೆತ್ತಿರುವ ಅರುಣ್ ಯೋಗಿರಾಜ್ ಅವರಿಂದಲೇ ವಿಗ್ರಹ ಕೆತ್ತಿಸಬೇಕೆಂದು ಅಲಿಯಾ ಭಟ್ ಕುಟುಂಬ ನಿರ್ಧರಿಸಿತ್ತು. ಅಂತೆಯೇ ಅರುಣ್ ಯೋಗಿರಾಜ್ ಅವರನ್ನು ಮುಂಬೈಗೆ ಕರೆಸಿಕೊಂಡು ಮಾಹಿತಿ ನೀಡಿದ್ದರು. ಅದರಂತೆ ಶಿಲ್ಪಿ ಅರುಣ್ ಯೋಗಿರಾಜ್ ಅವರು, ಸ್ಟಾರ್ ದಂಪತಿಯ ಮನೆಯ ವಾತಾವರಣ ನೋಡಿ, ಅಲ್ಲಿಗೆ ಸೂಕ್ತ ಎನಿಸುವ ಗಣಪತಿ ವಿಗ್ರಹ ಕೆತ್ತಿದ್ದಾರೆ. ಆಲಿಯಾ ಭಟ್ ಅವರ ಕುಟುಂಬವು ಸೆಪ್ಟೆಂಬರ್ 17 ರಂದು ವಿಗ್ರಹಕ್ಕೆ ವಿಶೇಷ ಪೂಜೆಯನ್ನು ನಡೆಸಿತು, ಇಂದು ವಿಗ್ರಹವವನ್ನು ಮುಂಬೈನಲ್ಲಿರುವ ಆಲಿಯಾ ಹೊಸ ಮನೆಗೆ ಸಾಗಿಸಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಪ್ರವಾಸಿತಾಣ ಉತ್ತೇಜಿಸಲು ಪ್ರವಾಸಿ ಗೈಡ್‌, ಮ್ಯಾಪ್‌ ಸಿದ್ದ : ಮಂಡ್ಯದಲ್ಲಿ 106 ಪ್ರವಾಸಿ ತಾಣಗಳ ಪರಿಗಣನೆ

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…

2 mins ago

ಕೆ.ಆರ್‌.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…

8 mins ago

ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿ ಪಾಲಾಗದಂತೆ ಗೃಹಲಕ್ಷ್ಮಿ ಜಾರಿ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ…

10 mins ago

ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದ ಪುತ್ತರಿ ಕೋಲಾಟ

ನಾಪೋಕ್ಲು : ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ ಮಂದ್‌ನಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.…

12 mins ago

ರೈಲು ನಿಲ್ದಾಣಗಳಿಗೆ ಭೇಟಿ,ಪರಿಶೀಲನೆ ನಡೆಸಿದ ಡಿಆರ್‌ಎಂ ಮುದಿತ್‌ ಮಿತ್ತಲ್‌

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ…

30 mins ago

ಪೊಲೀಸರು ಯಾರನ್ನು ಓಲೈಕೆ ಮಾಡದಿರಿ : ಡಿಜಿಪಿ ಚಂದ್ರಶೇಖರ್‌ ಸಲಹೆ

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ…

39 mins ago