ದೇಶ- ವಿದೇಶ

ಅಮೇರಿಕದ ಡಾಲರ್‌ ಬದಲಿಗೆ ಹೊಸ ಕರೆನ್ಸಿ ಅಭಿವೃದ್ದಿ; ಶೇ 100 ಸುಂಕ ವಿಧಿಸುವುದಾಗಿ ಬ್ರಿಕ್ಸ್ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಬ್ರಿಕ್ಸ್‌ ಗುಂಪಿನಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳು ಇದ್ದವು. ಇದೀಗ ಇರಾನ್‌, ಸೌದಿ ಅರೇಬಿಯಾ, ಯುಎಇ, ಅರ್ಜೆಂಟೀನಾ, ಈಜಿಪ್ಟ್‌ ಮತ್ತು ಇಥಿಯೋಪಿಯಾ ದೇಶಗಳು ಸೇರ್ಪಡೆಗೊಂಡಿವೆ.

ಬ್ರಿಕ್ಸ್‌ ದೇಶಗಳು ಡಾಲರ್‌ನಿಂದ ದೂರ ಹೋಗುವ ಹಾಗಿಲ್ಲ ಎಂದು ಟ್ರಂಪ್‌ ಭಾನುವಾರ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಆದರೆ ಡಾಲರ್‌ಗೆ ಪರ್ಯಾಯಗಳನ್ನು ಸೃಷ್ಠಿಸುವ ಕುರಿತು ಬ್ರಿಕ್ಸ್‌ ದೇಶಗಳು ಧ್ವನಿಯೆತ್ತಿವೆ.

ಹೊಸ ಮೀಸಲು ಕರೆನ್ಸಿ ತಯಾರು ಮಾಡಲು ಚೀನಾ ಮತ್ತು ರಷ್ಯಾ ಮುಂಚೂಣಿಯಲ್ಲಿದ್ದಾವೆ. ಕಳೆದ ವರ್ಷ ರಷ್ಯಾದ ಕಝನ್‌ನಲ್ಲಿ ನಡೆದ ಶೃಂಗಸಭೆಗಳಲ್ಲಿ ಬ್ರಿಕ್ಸ್‌ ಕರೆನ್ಸಿ ಪ್ರಸ್ತಾಪವನ್ನು ಚರ್ಚಿಸಲಾಗಿತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ ಬದಲಿಗೆ ಯಾವುದೇ ಹೊಸ ಕರೆನ್ಸಿಯನ್ನು ಸೃಷ್ಠಿಸಿದರು ಆ ದೇಶಗಳು ಅಮೇರಿಕಾದಿಂದ ಶೇ. 100 ಸುಂಕಕ್ಕೆ ತುತ್ತಾಗಬೇಕಾಗುತ್ತದೆ. ಬ್ರಿಕ್ಸ್‌ ದೇಶಗಳು ಸೇರಿದಂತೆ ಇನ್ನುಳಿದ ದೇಶಗಳು ಬದಲಿ ಕರೆನ್ಸಿಯನ್ನು ಬೆಂಬಲಿಸುವುದಿಲ್ಲ ಎಂಬ ನಿಲುವು ಸ್ಪಷ್ಟಪಡಿಸಬೇಕಾಗಿದೆ. ಏನಾದರು ಪ್ರಯತ್ನ ಮಾಡಿದರೆ ಅಮೇರಿಕಾದ ಅದ್ಭುತ ಮಾರುಕಟ್ಟೆಯಿಂದ ದೂರ ಸರಿಯಬೇಕಾಗುತ್ತದೆ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾದಕ ದ್ರವ್ಯ ಕಳ್ಳ ಸಾಗಣೆ ಸಮಸ್ಯೆಗಳು ಮೆಕ್ಸಿಕೊ, ಕೆನಡಾ, ಚೀನಾ ದೇಶಗಳಲ್ಲಿ ಹೆಚ್ಚಾಗಿದೆ. ಇದು ಪ್ರಪಂಚಕ್ಕೆ ಮಾರಕ ಇಂತ ದೇಶಗಳಿಂದ ನಮಗೆ ರಫ್ತಾಗುವ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

7 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

29 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

45 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago