ದೇಶ- ವಿದೇಶ

ಅಮೇರಿಕದ ಡಾಲರ್‌ ಬದಲಿಗೆ ಹೊಸ ಕರೆನ್ಸಿ ಅಭಿವೃದ್ದಿ; ಶೇ 100 ಸುಂಕ ವಿಧಿಸುವುದಾಗಿ ಬ್ರಿಕ್ಸ್ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಬ್ರಿಕ್ಸ್‌ ಗುಂಪಿನಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳು ಇದ್ದವು. ಇದೀಗ ಇರಾನ್‌, ಸೌದಿ ಅರೇಬಿಯಾ, ಯುಎಇ, ಅರ್ಜೆಂಟೀನಾ, ಈಜಿಪ್ಟ್‌ ಮತ್ತು ಇಥಿಯೋಪಿಯಾ ದೇಶಗಳು ಸೇರ್ಪಡೆಗೊಂಡಿವೆ.

ಬ್ರಿಕ್ಸ್‌ ದೇಶಗಳು ಡಾಲರ್‌ನಿಂದ ದೂರ ಹೋಗುವ ಹಾಗಿಲ್ಲ ಎಂದು ಟ್ರಂಪ್‌ ಭಾನುವಾರ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಆದರೆ ಡಾಲರ್‌ಗೆ ಪರ್ಯಾಯಗಳನ್ನು ಸೃಷ್ಠಿಸುವ ಕುರಿತು ಬ್ರಿಕ್ಸ್‌ ದೇಶಗಳು ಧ್ವನಿಯೆತ್ತಿವೆ.

ಹೊಸ ಮೀಸಲು ಕರೆನ್ಸಿ ತಯಾರು ಮಾಡಲು ಚೀನಾ ಮತ್ತು ರಷ್ಯಾ ಮುಂಚೂಣಿಯಲ್ಲಿದ್ದಾವೆ. ಕಳೆದ ವರ್ಷ ರಷ್ಯಾದ ಕಝನ್‌ನಲ್ಲಿ ನಡೆದ ಶೃಂಗಸಭೆಗಳಲ್ಲಿ ಬ್ರಿಕ್ಸ್‌ ಕರೆನ್ಸಿ ಪ್ರಸ್ತಾಪವನ್ನು ಚರ್ಚಿಸಲಾಗಿತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ ಬದಲಿಗೆ ಯಾವುದೇ ಹೊಸ ಕರೆನ್ಸಿಯನ್ನು ಸೃಷ್ಠಿಸಿದರು ಆ ದೇಶಗಳು ಅಮೇರಿಕಾದಿಂದ ಶೇ. 100 ಸುಂಕಕ್ಕೆ ತುತ್ತಾಗಬೇಕಾಗುತ್ತದೆ. ಬ್ರಿಕ್ಸ್‌ ದೇಶಗಳು ಸೇರಿದಂತೆ ಇನ್ನುಳಿದ ದೇಶಗಳು ಬದಲಿ ಕರೆನ್ಸಿಯನ್ನು ಬೆಂಬಲಿಸುವುದಿಲ್ಲ ಎಂಬ ನಿಲುವು ಸ್ಪಷ್ಟಪಡಿಸಬೇಕಾಗಿದೆ. ಏನಾದರು ಪ್ರಯತ್ನ ಮಾಡಿದರೆ ಅಮೇರಿಕಾದ ಅದ್ಭುತ ಮಾರುಕಟ್ಟೆಯಿಂದ ದೂರ ಸರಿಯಬೇಕಾಗುತ್ತದೆ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾದಕ ದ್ರವ್ಯ ಕಳ್ಳ ಸಾಗಣೆ ಸಮಸ್ಯೆಗಳು ಮೆಕ್ಸಿಕೊ, ಕೆನಡಾ, ಚೀನಾ ದೇಶಗಳಲ್ಲಿ ಹೆಚ್ಚಾಗಿದೆ. ಇದು ಪ್ರಪಂಚಕ್ಕೆ ಮಾರಕ ಇಂತ ದೇಶಗಳಿಂದ ನಮಗೆ ರಫ್ತಾಗುವ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

3 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

4 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

5 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago