ದೇಶ- ವಿದೇಶ

ಅಮೇರಿಕದ ಡಾಲರ್‌ ಬದಲಿಗೆ ಹೊಸ ಕರೆನ್ಸಿ ಅಭಿವೃದ್ದಿ; ಶೇ 100 ಸುಂಕ ವಿಧಿಸುವುದಾಗಿ ಬ್ರಿಕ್ಸ್ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಬ್ರಿಕ್ಸ್‌ ಗುಂಪಿನಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳು ಇದ್ದವು. ಇದೀಗ ಇರಾನ್‌, ಸೌದಿ ಅರೇಬಿಯಾ, ಯುಎಇ, ಅರ್ಜೆಂಟೀನಾ, ಈಜಿಪ್ಟ್‌ ಮತ್ತು ಇಥಿಯೋಪಿಯಾ ದೇಶಗಳು ಸೇರ್ಪಡೆಗೊಂಡಿವೆ.

ಬ್ರಿಕ್ಸ್‌ ದೇಶಗಳು ಡಾಲರ್‌ನಿಂದ ದೂರ ಹೋಗುವ ಹಾಗಿಲ್ಲ ಎಂದು ಟ್ರಂಪ್‌ ಭಾನುವಾರ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಆದರೆ ಡಾಲರ್‌ಗೆ ಪರ್ಯಾಯಗಳನ್ನು ಸೃಷ್ಠಿಸುವ ಕುರಿತು ಬ್ರಿಕ್ಸ್‌ ದೇಶಗಳು ಧ್ವನಿಯೆತ್ತಿವೆ.

ಹೊಸ ಮೀಸಲು ಕರೆನ್ಸಿ ತಯಾರು ಮಾಡಲು ಚೀನಾ ಮತ್ತು ರಷ್ಯಾ ಮುಂಚೂಣಿಯಲ್ಲಿದ್ದಾವೆ. ಕಳೆದ ವರ್ಷ ರಷ್ಯಾದ ಕಝನ್‌ನಲ್ಲಿ ನಡೆದ ಶೃಂಗಸಭೆಗಳಲ್ಲಿ ಬ್ರಿಕ್ಸ್‌ ಕರೆನ್ಸಿ ಪ್ರಸ್ತಾಪವನ್ನು ಚರ್ಚಿಸಲಾಗಿತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ ಬದಲಿಗೆ ಯಾವುದೇ ಹೊಸ ಕರೆನ್ಸಿಯನ್ನು ಸೃಷ್ಠಿಸಿದರು ಆ ದೇಶಗಳು ಅಮೇರಿಕಾದಿಂದ ಶೇ. 100 ಸುಂಕಕ್ಕೆ ತುತ್ತಾಗಬೇಕಾಗುತ್ತದೆ. ಬ್ರಿಕ್ಸ್‌ ದೇಶಗಳು ಸೇರಿದಂತೆ ಇನ್ನುಳಿದ ದೇಶಗಳು ಬದಲಿ ಕರೆನ್ಸಿಯನ್ನು ಬೆಂಬಲಿಸುವುದಿಲ್ಲ ಎಂಬ ನಿಲುವು ಸ್ಪಷ್ಟಪಡಿಸಬೇಕಾಗಿದೆ. ಏನಾದರು ಪ್ರಯತ್ನ ಮಾಡಿದರೆ ಅಮೇರಿಕಾದ ಅದ್ಭುತ ಮಾರುಕಟ್ಟೆಯಿಂದ ದೂರ ಸರಿಯಬೇಕಾಗುತ್ತದೆ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾದಕ ದ್ರವ್ಯ ಕಳ್ಳ ಸಾಗಣೆ ಸಮಸ್ಯೆಗಳು ಮೆಕ್ಸಿಕೊ, ಕೆನಡಾ, ಚೀನಾ ದೇಶಗಳಲ್ಲಿ ಹೆಚ್ಚಾಗಿದೆ. ಇದು ಪ್ರಪಂಚಕ್ಕೆ ಮಾರಕ ಇಂತ ದೇಶಗಳಿಂದ ನಮಗೆ ರಫ್ತಾಗುವ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

3 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

3 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

4 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

4 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

4 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

5 hours ago