ದೇಶ- ವಿದೇಶ

ಅಮೇರಿಕದ ಡಾಲರ್‌ ಬದಲಿಗೆ ಹೊಸ ಕರೆನ್ಸಿ ಅಭಿವೃದ್ದಿ; ಶೇ 100 ಸುಂಕ ವಿಧಿಸುವುದಾಗಿ ಬ್ರಿಕ್ಸ್ ದೇಶಗಳಿಗೆ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ ಡಿಸಿ: ಅಂತರಾಷ್ಟ್ರೀಯ ವ್ಯಾಪರಕ್ಕೆ ಸಂಬಂಧಿಸಿದಂತೆ ಬ್ರಿಕ್ಸ್‌ ದೇಶಗಳು ಡಾಲರ್‌ ಮೇಲಿನ ಅವಲಂಬನೆ ಕೈಬಿಟ್ಟು ಹೊಸ ಕರೆನ್ಸಿ ಅಭಿವೃದ್ಧಿ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ 100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೇರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ.

ಬ್ರಿಕ್ಸ್‌ ಗುಂಪಿನಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ, ದಕ್ಷಿಣ ಆಫ್ರಿಕಾ ದೇಶಗಳು ಇದ್ದವು. ಇದೀಗ ಇರಾನ್‌, ಸೌದಿ ಅರೇಬಿಯಾ, ಯುಎಇ, ಅರ್ಜೆಂಟೀನಾ, ಈಜಿಪ್ಟ್‌ ಮತ್ತು ಇಥಿಯೋಪಿಯಾ ದೇಶಗಳು ಸೇರ್ಪಡೆಗೊಂಡಿವೆ.

ಬ್ರಿಕ್ಸ್‌ ದೇಶಗಳು ಡಾಲರ್‌ನಿಂದ ದೂರ ಹೋಗುವ ಹಾಗಿಲ್ಲ ಎಂದು ಟ್ರಂಪ್‌ ಭಾನುವಾರ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಆದರೆ ಡಾಲರ್‌ಗೆ ಪರ್ಯಾಯಗಳನ್ನು ಸೃಷ್ಠಿಸುವ ಕುರಿತು ಬ್ರಿಕ್ಸ್‌ ದೇಶಗಳು ಧ್ವನಿಯೆತ್ತಿವೆ.

ಹೊಸ ಮೀಸಲು ಕರೆನ್ಸಿ ತಯಾರು ಮಾಡಲು ಚೀನಾ ಮತ್ತು ರಷ್ಯಾ ಮುಂಚೂಣಿಯಲ್ಲಿದ್ದಾವೆ. ಕಳೆದ ವರ್ಷ ರಷ್ಯಾದ ಕಝನ್‌ನಲ್ಲಿ ನಡೆದ ಶೃಂಗಸಭೆಗಳಲ್ಲಿ ಬ್ರಿಕ್ಸ್‌ ಕರೆನ್ಸಿ ಪ್ರಸ್ತಾಪವನ್ನು ಚರ್ಚಿಸಲಾಗಿತ್ತು.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ ಬದಲಿಗೆ ಯಾವುದೇ ಹೊಸ ಕರೆನ್ಸಿಯನ್ನು ಸೃಷ್ಠಿಸಿದರು ಆ ದೇಶಗಳು ಅಮೇರಿಕಾದಿಂದ ಶೇ. 100 ಸುಂಕಕ್ಕೆ ತುತ್ತಾಗಬೇಕಾಗುತ್ತದೆ. ಬ್ರಿಕ್ಸ್‌ ದೇಶಗಳು ಸೇರಿದಂತೆ ಇನ್ನುಳಿದ ದೇಶಗಳು ಬದಲಿ ಕರೆನ್ಸಿಯನ್ನು ಬೆಂಬಲಿಸುವುದಿಲ್ಲ ಎಂಬ ನಿಲುವು ಸ್ಪಷ್ಟಪಡಿಸಬೇಕಾಗಿದೆ. ಏನಾದರು ಪ್ರಯತ್ನ ಮಾಡಿದರೆ ಅಮೇರಿಕಾದ ಅದ್ಭುತ ಮಾರುಕಟ್ಟೆಯಿಂದ ದೂರ ಸರಿಯಬೇಕಾಗುತ್ತದೆ ಎಂದು ಟ್ರಂಪ್‌ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾದಕ ದ್ರವ್ಯ ಕಳ್ಳ ಸಾಗಣೆ ಸಮಸ್ಯೆಗಳು ಮೆಕ್ಸಿಕೊ, ಕೆನಡಾ, ಚೀನಾ ದೇಶಗಳಲ್ಲಿ ಹೆಚ್ಚಾಗಿದೆ. ಇದು ಪ್ರಪಂಚಕ್ಕೆ ಮಾರಕ ಇಂತ ದೇಶಗಳಿಂದ ನಮಗೆ ರಫ್ತಾಗುವ ಸರಕುಗಳ ಮೇಲೆ ಸುಂಕ ಹೆಚ್ಚಿಸುವುದಾಗಿ ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago