ಚೈನ್ನೈ: ನೌಕಪಡೆಯ ಕರ್ತವ್ಯ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಬೆಳಗಾವಿ ಮೂಲದ ಓರ್ವ ಯೋಧ ಸಾವಿಗೀಡಾಗಿರುವ ಘಟನೆ ಚೈನ್ನೈನಲ್ಲಿ ನಡೆದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಘಟನೆಯಲ್ಲಿ ಮೃತಪಟ್ಟಿರುವ ಯೋಧನನ್ನು ಬೆಳಗಾವಿ ಜಿಲ್ಲೆಯ ಮೂಡಲಗಿಯ ಕಲ್ಲೋಳಿ ಗ್ರಾಮದ ಪ್ರವೀಣ್ ಸುಭಾಷ್ ಖಾನಗೌಡರ ಎಂದು ಗುರುತಿಸಲಾಗಿದೆ. ಅವರು ಚೈನ್ನೈನ ನೌಕಾಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಪ್ರವೀಣ್ ಸುಭಾಷ್ ಅವರಿಗೆ ಕರ್ತವ್ಯದ ವೇಳೆ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ಅವರ ತಲೆಗೆ ಹಾರಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತ ಯೋಧ ಸಾಯುವುದಕ್ಕೂ ಒಂದು ಗಂಟೆಯ ಮುನ್ನ ತಾಯಿಯೊಂದಿಗೆ ಫೋನ್ ಕರೆಯ ಮೂಲಕ ಮಾತನಾಡಿದ್ದರು. ಇನ್ನು ಈ ಯೋಧ 2020ರ ಫೆಬ್ರವರಿ.12 ರಂದು ನೌಕಾಪಡೆಗೆ ಸೇರಿದ್ದರು. ಆದರೆ ಇಂದು(ಫೆಬ್ರವರಿ.14) ಸಾವನ್ನಪ್ಪಿ ಇಹಲೋಕ ತ್ಯಜಿಸಿದ್ದಾರೆ. ಅವರ ಪಾರ್ಥಿವ ಶರೀರ ಕಲ್ಲೋಳಿಗೆ ತಲುಪಿದ್ದು, ಗ್ರಾಮದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಾಯಿತಿಯ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…