ದೇಶ- ವಿದೇಶ

ಫೋಟೋ ತೆಗೆಸಿಕೊಳ್ಳಲು ಹೋಗಿ ನೀರುಪಾಲಾದ ಯುವಕ

 ತಮಿಳುನಾಡು: ತಮಿಳುನಾಡಿನ ಕೊಡೈಕೆನಾಲ್‌ನ ಬಳಿಯ ಪುಲ್ಲವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಕ್ಕೆ ಬಿದ್ದ ಯುವಕನನ್ನು 26 ವರ್ಷದ ಅಜಯ್‌ ಪಾಂಡಿಯನ್‌ ಎಂದು ಗುರುತಿಸಲಾಗಿದೆ. ಇನ್ನು, ಆತನ ಸ್ನೇಹಿತ ಸಂಪೂರ್ಣ ದೃಶ್ಯಾವಳಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ಅಪಾಯಕಾರಿ ಸ್ಥಳಕ್ಕೆ ಹೋಗುವಾಗ ಅಜಯ್‌ ಸ್ನೇಹಿತ ವಿಡಿಯೋ ತೆಗೆಯುತ್ತಿದ್ದ, ನಂತರ ಆ ಸ್ಥಳದಲ್ಲಿ ಫೋಟೋಗೆ ಪೋಸ್‌ ನೀಡಿದ ಬಳಿಕ ಜಲಪಾತದತ್ತ ತಿರುಗಿ ನೋಡಲು ಹೋದಾಗ ಕಾಲು ಜಾರಿ ಯುವಕ ಜಲಪಾತಕ್ಕೆ ಅಂದರೆ ಕೆಳಗೆ ಬಿದ್ದಿದ್ದಾನೆ. ಆಗಸ್ಟ್‌ 3, ಬುಧವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನು, ಈ ಘಟನೆ ಬೆಳಕಿಗೆ ಬಂದ ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದರೂ, ಇನ್ನೂ ಆತ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಅಜಯ್‌ ಸ್ನೇಹಿತ ತೆಗೆದ 47 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪುಲ್ಲವೇಲಿ ಗ್ರಾಮದಲ್ಲಿರುವ ಆ ಜಲಪಾತ ಹೆಚ್ಚು ಅಪಾಯಕಾರಿ ಎನ್ನಲಾಗಿದ್ದು, ಆದರೂ ಪರ್ಫೆಕ್ಟ್‌ ಫೋಟೋಗಾಗಿ ಯುವಕ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದಾನೆ.

ಜಲಪಾತದ ತುದಿಗೆ ಹೋಗಿ ಬಂಡೆಕಲ್ಲಿನ ಮೇಲೆ ನಿಂತುಕೊಂಡು ಫೋಟೋಗೆ ಪೋಸ್‌ ನೀಡುತ್ತಿರುತ್ತಾನೆ. ನಂತರ, ಫೋಟೋ, ವಿಡಿಯೋವನ್ನು ಇನ್ನೂ ಮುಂದೆ ಬಂದು ತೆಗೆಯಲು ಹೇಳುತ್ತಾನೆ. ಆ ಜಲಪಾತದ ಆಳವನ್ನು ವಿಡಿಯೋದಲ್ಲಿ ಸೆರೆ ಹಿಡಿಯುವುದು ಅವರ ಉದ್ದೇಶ ಎಂದು ಹೇಳಬಹುದು. ಬಳಿಕ, ಅಜಯ್ ಪಾಂಡಿಯನ್‌ ಜಾರುತ್ತಿದ್ದ ಜಲಪಾತದ ತುದಿಯ ಕಲ್ಲಿನ ಮೇಲೆ ನಿಂತುಕೊಂಡು, ಕ್ಯಾಮೆರಾದ ಕಡೆಗೆ ನೋಡಿ ಫೋಟೋಗೆ ಪೋಸ್‌ ನೀಡುತಾನೆ. ಆ ಪೋಸ್‌ ಬಳಿಕ ಜಲಪಾತವನ್ನು ನೋಡಲು ತಿರುಗುತ್ತಾನೆ. ಆದರೆ, ಕೆಲವೇ ಕ್ಷಣಗಳ ಬಳಿಕ ಅಜಯ್‌ ಕಾಲು ಜಾರಿ ಬ್ಯಾಲೆನ್ಸ್ ತಪ್ಪುತ್ತಾನೆ.

ನಂತರ 3 –  4 ಸೆಕೆಂಡುಗಳಲ್ಲಿ ಆತ ಕೆಳಕ್ಕೆ ಬೀಳುತ್ತಾನೆ. ಹಾಗೆ, ಜಲಪಾತದಲ್ಲಿ ನಾಪತ್ತೆಯಾಗುತ್ತಾನೆ ಎಂದು ತಿಳಿದುಬಂದಿದೆ. ಇದನ್ನು ನೋಡಿ ಗಾಬರಿಯಾದ ಗೆಳೆಯ ಕೂಗಿಕೊಂಡು, ನಂತರ ಇಡೀ ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಹೋದರೂ, ಈವರೆಗೆ ಅಜಯ್‌ ಅನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಇದೇ ರೀತಿ, ಜುಲೈ 16 ರಂದು ಬೆಂಗಳೂರಿನ 26 ವರ್ಷದ ಮಹಿಳಾ ಟೆಕ್ಕಿಯೊಬ್ಬರು ಮದಿಯಲ್ಲಿ ನೀಲಗಿರೀಸ್‌ ಬಳಳಿಯ ಕಲಹಟ್ಟಿಯ ಸಿಯುರ್‌ಹಳ್ಳ ನದಿಯಲ್ಲಿ ಮುಳುಗಿದ್ದರು. ನದಿಯ ದಡದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಹೋಗಿ ಆಕೆ ಮುಳುಗಿದ್ದರು.  ಇನ್ನು, ಅದು ನಿರ್ಬಂಧಿತ ಸ್ಥಳವಾಗಿದ್ದರೂ, ರೆಸಾರ್ಟ್‌ ಸಿಬ್ಬಂದಿಯ ನೆರವಿನಿಂದ ಆ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದರು ಎಂದು ತಿಳಿದುಬಂದಿದ್ದು, ನಂತರ ಆ ರೆಸಾರ್ಟ್‌ ಅನ್ನು ಸೀಲ್ ಮಾಡಲಾಗಿತ್ತು. ಅಲ್ಲದೆ, ಇದೇ ರೀತಿ ಆ ರೆಸಾರ್ಟ್‌ನವರು ಈ ಹಿಂದೆಯೂ ಒಮ್ಮೆ ಅಪಾಯಕಾರಿ ಹಾಗೂ ನಿರ್ಬಂಧಿತ ಸ್ಥಳಕ್ಕೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿತ್ತು.

andolana

Recent Posts

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

2 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

2 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

2 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

2 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

2 hours ago

ದೇವನೂರಿಗೆ ಆಗಮಿಸಿದ ಪಂಪ

ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…

3 hours ago