ದೇಶ- ವಿದೇಶ

ಫೋಟೋ ತೆಗೆಸಿಕೊಳ್ಳಲು ಹೋಗಿ ನೀರುಪಾಲಾದ ಯುವಕ

 ತಮಿಳುನಾಡು: ತಮಿಳುನಾಡಿನ ಕೊಡೈಕೆನಾಲ್‌ನ ಬಳಿಯ ಪುಲ್ಲವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಕ್ಕೆ ಬಿದ್ದ ಯುವಕನನ್ನು 26 ವರ್ಷದ ಅಜಯ್‌ ಪಾಂಡಿಯನ್‌ ಎಂದು ಗುರುತಿಸಲಾಗಿದೆ. ಇನ್ನು, ಆತನ ಸ್ನೇಹಿತ ಸಂಪೂರ್ಣ ದೃಶ್ಯಾವಳಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ಅಪಾಯಕಾರಿ ಸ್ಥಳಕ್ಕೆ ಹೋಗುವಾಗ ಅಜಯ್‌ ಸ್ನೇಹಿತ ವಿಡಿಯೋ ತೆಗೆಯುತ್ತಿದ್ದ, ನಂತರ ಆ ಸ್ಥಳದಲ್ಲಿ ಫೋಟೋಗೆ ಪೋಸ್‌ ನೀಡಿದ ಬಳಿಕ ಜಲಪಾತದತ್ತ ತಿರುಗಿ ನೋಡಲು ಹೋದಾಗ ಕಾಲು ಜಾರಿ ಯುವಕ ಜಲಪಾತಕ್ಕೆ ಅಂದರೆ ಕೆಳಗೆ ಬಿದ್ದಿದ್ದಾನೆ. ಆಗಸ್ಟ್‌ 3, ಬುಧವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನು, ಈ ಘಟನೆ ಬೆಳಕಿಗೆ ಬಂದ ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದರೂ, ಇನ್ನೂ ಆತ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಅಜಯ್‌ ಸ್ನೇಹಿತ ತೆಗೆದ 47 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪುಲ್ಲವೇಲಿ ಗ್ರಾಮದಲ್ಲಿರುವ ಆ ಜಲಪಾತ ಹೆಚ್ಚು ಅಪಾಯಕಾರಿ ಎನ್ನಲಾಗಿದ್ದು, ಆದರೂ ಪರ್ಫೆಕ್ಟ್‌ ಫೋಟೋಗಾಗಿ ಯುವಕ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದಾನೆ.

ಜಲಪಾತದ ತುದಿಗೆ ಹೋಗಿ ಬಂಡೆಕಲ್ಲಿನ ಮೇಲೆ ನಿಂತುಕೊಂಡು ಫೋಟೋಗೆ ಪೋಸ್‌ ನೀಡುತ್ತಿರುತ್ತಾನೆ. ನಂತರ, ಫೋಟೋ, ವಿಡಿಯೋವನ್ನು ಇನ್ನೂ ಮುಂದೆ ಬಂದು ತೆಗೆಯಲು ಹೇಳುತ್ತಾನೆ. ಆ ಜಲಪಾತದ ಆಳವನ್ನು ವಿಡಿಯೋದಲ್ಲಿ ಸೆರೆ ಹಿಡಿಯುವುದು ಅವರ ಉದ್ದೇಶ ಎಂದು ಹೇಳಬಹುದು. ಬಳಿಕ, ಅಜಯ್ ಪಾಂಡಿಯನ್‌ ಜಾರುತ್ತಿದ್ದ ಜಲಪಾತದ ತುದಿಯ ಕಲ್ಲಿನ ಮೇಲೆ ನಿಂತುಕೊಂಡು, ಕ್ಯಾಮೆರಾದ ಕಡೆಗೆ ನೋಡಿ ಫೋಟೋಗೆ ಪೋಸ್‌ ನೀಡುತಾನೆ. ಆ ಪೋಸ್‌ ಬಳಿಕ ಜಲಪಾತವನ್ನು ನೋಡಲು ತಿರುಗುತ್ತಾನೆ. ಆದರೆ, ಕೆಲವೇ ಕ್ಷಣಗಳ ಬಳಿಕ ಅಜಯ್‌ ಕಾಲು ಜಾರಿ ಬ್ಯಾಲೆನ್ಸ್ ತಪ್ಪುತ್ತಾನೆ.

ನಂತರ 3 –  4 ಸೆಕೆಂಡುಗಳಲ್ಲಿ ಆತ ಕೆಳಕ್ಕೆ ಬೀಳುತ್ತಾನೆ. ಹಾಗೆ, ಜಲಪಾತದಲ್ಲಿ ನಾಪತ್ತೆಯಾಗುತ್ತಾನೆ ಎಂದು ತಿಳಿದುಬಂದಿದೆ. ಇದನ್ನು ನೋಡಿ ಗಾಬರಿಯಾದ ಗೆಳೆಯ ಕೂಗಿಕೊಂಡು, ನಂತರ ಇಡೀ ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಹೋದರೂ, ಈವರೆಗೆ ಅಜಯ್‌ ಅನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಇದೇ ರೀತಿ, ಜುಲೈ 16 ರಂದು ಬೆಂಗಳೂರಿನ 26 ವರ್ಷದ ಮಹಿಳಾ ಟೆಕ್ಕಿಯೊಬ್ಬರು ಮದಿಯಲ್ಲಿ ನೀಲಗಿರೀಸ್‌ ಬಳಳಿಯ ಕಲಹಟ್ಟಿಯ ಸಿಯುರ್‌ಹಳ್ಳ ನದಿಯಲ್ಲಿ ಮುಳುಗಿದ್ದರು. ನದಿಯ ದಡದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಹೋಗಿ ಆಕೆ ಮುಳುಗಿದ್ದರು.  ಇನ್ನು, ಅದು ನಿರ್ಬಂಧಿತ ಸ್ಥಳವಾಗಿದ್ದರೂ, ರೆಸಾರ್ಟ್‌ ಸಿಬ್ಬಂದಿಯ ನೆರವಿನಿಂದ ಆ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದರು ಎಂದು ತಿಳಿದುಬಂದಿದ್ದು, ನಂತರ ಆ ರೆಸಾರ್ಟ್‌ ಅನ್ನು ಸೀಲ್ ಮಾಡಲಾಗಿತ್ತು. ಅಲ್ಲದೆ, ಇದೇ ರೀತಿ ಆ ರೆಸಾರ್ಟ್‌ನವರು ಈ ಹಿಂದೆಯೂ ಒಮ್ಮೆ ಅಪಾಯಕಾರಿ ಹಾಗೂ ನಿರ್ಬಂಧಿತ ಸ್ಥಳಕ್ಕೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿತ್ತು.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago