ದೇಶ- ವಿದೇಶ

ಫೋಟೋ ತೆಗೆಸಿಕೊಳ್ಳಲು ಹೋಗಿ ನೀರುಪಾಲಾದ ಯುವಕ

 ತಮಿಳುನಾಡು: ತಮಿಳುನಾಡಿನ ಕೊಡೈಕೆನಾಲ್‌ನ ಬಳಿಯ ಪುಲ್ಲವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಕ್ಕೆ ಬಿದ್ದ ಯುವಕನನ್ನು 26 ವರ್ಷದ ಅಜಯ್‌ ಪಾಂಡಿಯನ್‌ ಎಂದು ಗುರುತಿಸಲಾಗಿದೆ. ಇನ್ನು, ಆತನ ಸ್ನೇಹಿತ ಸಂಪೂರ್ಣ ದೃಶ್ಯಾವಳಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ಅಪಾಯಕಾರಿ ಸ್ಥಳಕ್ಕೆ ಹೋಗುವಾಗ ಅಜಯ್‌ ಸ್ನೇಹಿತ ವಿಡಿಯೋ ತೆಗೆಯುತ್ತಿದ್ದ, ನಂತರ ಆ ಸ್ಥಳದಲ್ಲಿ ಫೋಟೋಗೆ ಪೋಸ್‌ ನೀಡಿದ ಬಳಿಕ ಜಲಪಾತದತ್ತ ತಿರುಗಿ ನೋಡಲು ಹೋದಾಗ ಕಾಲು ಜಾರಿ ಯುವಕ ಜಲಪಾತಕ್ಕೆ ಅಂದರೆ ಕೆಳಗೆ ಬಿದ್ದಿದ್ದಾನೆ. ಆಗಸ್ಟ್‌ 3, ಬುಧವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನು, ಈ ಘಟನೆ ಬೆಳಕಿಗೆ ಬಂದ ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದರೂ, ಇನ್ನೂ ಆತ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಅಜಯ್‌ ಸ್ನೇಹಿತ ತೆಗೆದ 47 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪುಲ್ಲವೇಲಿ ಗ್ರಾಮದಲ್ಲಿರುವ ಆ ಜಲಪಾತ ಹೆಚ್ಚು ಅಪಾಯಕಾರಿ ಎನ್ನಲಾಗಿದ್ದು, ಆದರೂ ಪರ್ಫೆಕ್ಟ್‌ ಫೋಟೋಗಾಗಿ ಯುವಕ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದಾನೆ.

ಜಲಪಾತದ ತುದಿಗೆ ಹೋಗಿ ಬಂಡೆಕಲ್ಲಿನ ಮೇಲೆ ನಿಂತುಕೊಂಡು ಫೋಟೋಗೆ ಪೋಸ್‌ ನೀಡುತ್ತಿರುತ್ತಾನೆ. ನಂತರ, ಫೋಟೋ, ವಿಡಿಯೋವನ್ನು ಇನ್ನೂ ಮುಂದೆ ಬಂದು ತೆಗೆಯಲು ಹೇಳುತ್ತಾನೆ. ಆ ಜಲಪಾತದ ಆಳವನ್ನು ವಿಡಿಯೋದಲ್ಲಿ ಸೆರೆ ಹಿಡಿಯುವುದು ಅವರ ಉದ್ದೇಶ ಎಂದು ಹೇಳಬಹುದು. ಬಳಿಕ, ಅಜಯ್ ಪಾಂಡಿಯನ್‌ ಜಾರುತ್ತಿದ್ದ ಜಲಪಾತದ ತುದಿಯ ಕಲ್ಲಿನ ಮೇಲೆ ನಿಂತುಕೊಂಡು, ಕ್ಯಾಮೆರಾದ ಕಡೆಗೆ ನೋಡಿ ಫೋಟೋಗೆ ಪೋಸ್‌ ನೀಡುತಾನೆ. ಆ ಪೋಸ್‌ ಬಳಿಕ ಜಲಪಾತವನ್ನು ನೋಡಲು ತಿರುಗುತ್ತಾನೆ. ಆದರೆ, ಕೆಲವೇ ಕ್ಷಣಗಳ ಬಳಿಕ ಅಜಯ್‌ ಕಾಲು ಜಾರಿ ಬ್ಯಾಲೆನ್ಸ್ ತಪ್ಪುತ್ತಾನೆ.

ನಂತರ 3 –  4 ಸೆಕೆಂಡುಗಳಲ್ಲಿ ಆತ ಕೆಳಕ್ಕೆ ಬೀಳುತ್ತಾನೆ. ಹಾಗೆ, ಜಲಪಾತದಲ್ಲಿ ನಾಪತ್ತೆಯಾಗುತ್ತಾನೆ ಎಂದು ತಿಳಿದುಬಂದಿದೆ. ಇದನ್ನು ನೋಡಿ ಗಾಬರಿಯಾದ ಗೆಳೆಯ ಕೂಗಿಕೊಂಡು, ನಂತರ ಇಡೀ ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಹೋದರೂ, ಈವರೆಗೆ ಅಜಯ್‌ ಅನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಇದೇ ರೀತಿ, ಜುಲೈ 16 ರಂದು ಬೆಂಗಳೂರಿನ 26 ವರ್ಷದ ಮಹಿಳಾ ಟೆಕ್ಕಿಯೊಬ್ಬರು ಮದಿಯಲ್ಲಿ ನೀಲಗಿರೀಸ್‌ ಬಳಳಿಯ ಕಲಹಟ್ಟಿಯ ಸಿಯುರ್‌ಹಳ್ಳ ನದಿಯಲ್ಲಿ ಮುಳುಗಿದ್ದರು. ನದಿಯ ದಡದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಹೋಗಿ ಆಕೆ ಮುಳುಗಿದ್ದರು.  ಇನ್ನು, ಅದು ನಿರ್ಬಂಧಿತ ಸ್ಥಳವಾಗಿದ್ದರೂ, ರೆಸಾರ್ಟ್‌ ಸಿಬ್ಬಂದಿಯ ನೆರವಿನಿಂದ ಆ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದರು ಎಂದು ತಿಳಿದುಬಂದಿದ್ದು, ನಂತರ ಆ ರೆಸಾರ್ಟ್‌ ಅನ್ನು ಸೀಲ್ ಮಾಡಲಾಗಿತ್ತು. ಅಲ್ಲದೆ, ಇದೇ ರೀತಿ ಆ ರೆಸಾರ್ಟ್‌ನವರು ಈ ಹಿಂದೆಯೂ ಒಮ್ಮೆ ಅಪಾಯಕಾರಿ ಹಾಗೂ ನಿರ್ಬಂಧಿತ ಸ್ಥಳಕ್ಕೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿತ್ತು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

55 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago