ದೇಶ- ವಿದೇಶ

ಫೋಟೋ ತೆಗೆಸಿಕೊಳ್ಳಲು ಹೋಗಿ ನೀರುಪಾಲಾದ ಯುವಕ

 ತಮಿಳುನಾಡು: ತಮಿಳುನಾಡಿನ ಕೊಡೈಕೆನಾಲ್‌ನ ಬಳಿಯ ಪುಲ್ಲವೇಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಕ್ಕೆ ಬಿದ್ದ ಯುವಕನನ್ನು 26 ವರ್ಷದ ಅಜಯ್‌ ಪಾಂಡಿಯನ್‌ ಎಂದು ಗುರುತಿಸಲಾಗಿದೆ. ಇನ್ನು, ಆತನ ಸ್ನೇಹಿತ ಸಂಪೂರ್ಣ ದೃಶ್ಯಾವಳಿಯನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಆ ಅಪಾಯಕಾರಿ ಸ್ಥಳಕ್ಕೆ ಹೋಗುವಾಗ ಅಜಯ್‌ ಸ್ನೇಹಿತ ವಿಡಿಯೋ ತೆಗೆಯುತ್ತಿದ್ದ, ನಂತರ ಆ ಸ್ಥಳದಲ್ಲಿ ಫೋಟೋಗೆ ಪೋಸ್‌ ನೀಡಿದ ಬಳಿಕ ಜಲಪಾತದತ್ತ ತಿರುಗಿ ನೋಡಲು ಹೋದಾಗ ಕಾಲು ಜಾರಿ ಯುವಕ ಜಲಪಾತಕ್ಕೆ ಅಂದರೆ ಕೆಳಗೆ ಬಿದ್ದಿದ್ದಾನೆ. ಆಗಸ್ಟ್‌ 3, ಬುಧವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಇನ್ನು, ಈ ಘಟನೆ ಬೆಳಕಿಗೆ ಬಂದ ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಯುವಕನಿಗಾಗಿ ಹುಡುಕಾಟ ನಡೆಸುತ್ತಿದ್ದರೂ, ಇನ್ನೂ ಆತ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಅಜಯ್‌ ಸ್ನೇಹಿತ ತೆಗೆದ 47 ಸೆಕೆಂಡುಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪುಲ್ಲವೇಲಿ ಗ್ರಾಮದಲ್ಲಿರುವ ಆ ಜಲಪಾತ ಹೆಚ್ಚು ಅಪಾಯಕಾರಿ ಎನ್ನಲಾಗಿದ್ದು, ಆದರೂ ಪರ್ಫೆಕ್ಟ್‌ ಫೋಟೋಗಾಗಿ ಯುವಕ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದಾನೆ.

ಜಲಪಾತದ ತುದಿಗೆ ಹೋಗಿ ಬಂಡೆಕಲ್ಲಿನ ಮೇಲೆ ನಿಂತುಕೊಂಡು ಫೋಟೋಗೆ ಪೋಸ್‌ ನೀಡುತ್ತಿರುತ್ತಾನೆ. ನಂತರ, ಫೋಟೋ, ವಿಡಿಯೋವನ್ನು ಇನ್ನೂ ಮುಂದೆ ಬಂದು ತೆಗೆಯಲು ಹೇಳುತ್ತಾನೆ. ಆ ಜಲಪಾತದ ಆಳವನ್ನು ವಿಡಿಯೋದಲ್ಲಿ ಸೆರೆ ಹಿಡಿಯುವುದು ಅವರ ಉದ್ದೇಶ ಎಂದು ಹೇಳಬಹುದು. ಬಳಿಕ, ಅಜಯ್ ಪಾಂಡಿಯನ್‌ ಜಾರುತ್ತಿದ್ದ ಜಲಪಾತದ ತುದಿಯ ಕಲ್ಲಿನ ಮೇಲೆ ನಿಂತುಕೊಂಡು, ಕ್ಯಾಮೆರಾದ ಕಡೆಗೆ ನೋಡಿ ಫೋಟೋಗೆ ಪೋಸ್‌ ನೀಡುತಾನೆ. ಆ ಪೋಸ್‌ ಬಳಿಕ ಜಲಪಾತವನ್ನು ನೋಡಲು ತಿರುಗುತ್ತಾನೆ. ಆದರೆ, ಕೆಲವೇ ಕ್ಷಣಗಳ ಬಳಿಕ ಅಜಯ್‌ ಕಾಲು ಜಾರಿ ಬ್ಯಾಲೆನ್ಸ್ ತಪ್ಪುತ್ತಾನೆ.

ನಂತರ 3 –  4 ಸೆಕೆಂಡುಗಳಲ್ಲಿ ಆತ ಕೆಳಕ್ಕೆ ಬೀಳುತ್ತಾನೆ. ಹಾಗೆ, ಜಲಪಾತದಲ್ಲಿ ನಾಪತ್ತೆಯಾಗುತ್ತಾನೆ ಎಂದು ತಿಳಿದುಬಂದಿದೆ. ಇದನ್ನು ನೋಡಿ ಗಾಬರಿಯಾದ ಗೆಳೆಯ ಕೂಗಿಕೊಂಡು, ನಂತರ ಇಡೀ ಘಟನೆ ಬಗ್ಗೆ ಸ್ಥಳೀಯ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾನೆ. ಬಳಿಕ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಹೋದರೂ, ಈವರೆಗೆ ಅಜಯ್‌ ಅನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಇದೇ ರೀತಿ, ಜುಲೈ 16 ರಂದು ಬೆಂಗಳೂರಿನ 26 ವರ್ಷದ ಮಹಿಳಾ ಟೆಕ್ಕಿಯೊಬ್ಬರು ಮದಿಯಲ್ಲಿ ನೀಲಗಿರೀಸ್‌ ಬಳಳಿಯ ಕಲಹಟ್ಟಿಯ ಸಿಯುರ್‌ಹಳ್ಳ ನದಿಯಲ್ಲಿ ಮುಳುಗಿದ್ದರು. ನದಿಯ ದಡದಲ್ಲಿ ಸೆಲ್ಫಿ ತೆಗೆಸಿಕೊಳ್ಳಲು ಹೋಗಿ ಆಕೆ ಮುಳುಗಿದ್ದರು.  ಇನ್ನು, ಅದು ನಿರ್ಬಂಧಿತ ಸ್ಥಳವಾಗಿದ್ದರೂ, ರೆಸಾರ್ಟ್‌ ಸಿಬ್ಬಂದಿಯ ನೆರವಿನಿಂದ ಆ ಅಪಾಯಕಾರಿ ಸ್ಥಳಕ್ಕೆ ಹೋಗಿದ್ದರು ಎಂದು ತಿಳಿದುಬಂದಿದ್ದು, ನಂತರ ಆ ರೆಸಾರ್ಟ್‌ ಅನ್ನು ಸೀಲ್ ಮಾಡಲಾಗಿತ್ತು. ಅಲ್ಲದೆ, ಇದೇ ರೀತಿ ಆ ರೆಸಾರ್ಟ್‌ನವರು ಈ ಹಿಂದೆಯೂ ಒಮ್ಮೆ ಅಪಾಯಕಾರಿ ಹಾಗೂ ನಿರ್ಬಂಧಿತ ಸ್ಥಳಕ್ಕೆ ಪ್ರವಾಸಿಗರನ್ನು ಕರೆದುಕೊಂಡು ಹೋಗಿದ್ದರು ಎಂಬ ವಿಚಾರವೂ ಬೆಳಕಿಗೆ ಬಂದಿತ್ತು.

andolana

Recent Posts

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

1 hour ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

4 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

4 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

4 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

7 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

10 hours ago