ಕೇರಳ: 5 ವರ್ಷಗಳಿಂದ ತನ್ನ ಮೇಲೆ 64 ಮಂದಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿಯೊಬ್ಬಳು ಆರೋಪಿಸಿರುವುದು ಕೇರಳಾದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ.
ಸಂತ್ರಸ್ತ ಯುವತಿಯು ಕೇರಳದ ಪತ್ತನಂತಿಟ್ಟದವರಾಗಿದ್ದಾರೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಗೆ ಮಾಹಿತಿ ನೀಡಿದೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯನ್ನು ಸಿಡಬ್ಲ್ಯುಸಿ(ಮಕ್ಕಳ ಕಲ್ಯಾಣ ಸಮಿತಿ) ಮತ್ತು ಮನಶಾಸ್ತ್ರಜ್ಞರ ಜೊತೆಗೂ ಸಮಾಲೋಚನೆ ನಡೆಸಿದ್ದಾರೆ. ನನಗೆ 13 ವರ್ಷವಾಗಿದ್ದ ವೇಳೆ ಈ ಕಹಿ ಅನುಭವವಾಯಿತು. ಪುರುಷನೊಬ್ಬ ನನಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಆಗ ನನ್ನ ವಯಸ್ಸು 18 ಎಂದು ಬಹಿರಂಗಪಡಿಸಿದಳು.
ನಾನು ಶಾಲೆಗೆ ಓದುತ್ತಿದ್ದ ವೇಳೆ ಕಹಿ ಅನುಭವಗಳು ಆದವು. ಕ್ರೀಡೆಯಲ್ಲಿ ಸಕ್ರಿಯವಾಗಿರುವಾಗ ಹುಡುಗರು ಮತ್ತು ತರಬೇತಿದಾರರು ಕೂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಮಿತಿ ಮುಂದೆ ಕೆಲವು ವಿಡಿಯೋಗಳನ್ನು ನೊಂದ ಯುವತಿ ಹಂಚಿಕೊಂಡಿದ್ದಾಳೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೂ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ ನೊಂದಿರುವ ಯುವತಿಯಿಂದ ಇನ್ನು ಹೆಚ್ಚಿನ ವಿವರಣೆಗಳನ್ನು ಪಡೆಯಲು ಸಿಡಬ್ಲ್ಯುಸಿ ಮುಂದಾಗಿದೆ.
ನೊಂದಿರುವ ಯುವತಿಯ ಜೀವನಕ್ಕೆ ಅಪಾಯವಿದೆ. ಹೀಗಾಗಿ ಅವರಿಗೆ ನಾವು ಅಗತ್ಯವಾದ ಭದ್ರತೆ ಮತ್ತು ಆರೈಕೆಯನ್ನು ನೀಡಲಿದ್ದೇವೆ ಎಂದು ಪಟ್ಟಣಂತಿಟ್ಟ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್.ರಾಜೀವ್ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪೊಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಪಟ್ಟಣಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲುಸ್ತುವಾರಿಯಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಯುವತಿಗೆ ಮೊಬೈಲ್ ಫೋನ್ ಇಲ್ಲದ ಕಾರಣ ತಂದೆಯ ಮೊಬೈಲ್ ಬಳಸುತ್ತಿದ್ದಳು. ಈ ಫೋನ್ನಲ್ಲಿ ಯುವತಿ ತನಗೆ ಲೈಂಗಿಕ ಕಿರುಕುಳ ನೀಡಿದ ಸುಮಾರು 40 ಮಂದಿಯ ಹೆಸರು ಹಾಗೂ ದೂರವಾಣಿ ಸಂಖ್ಯೆಗಳನ್ನು ದಾಖಲಿಸಿದ್ದಾಳೆ.
ಯುವತಿಯ ಹೃದಯ ವಿದ್ರಾವಕ ಕಥೆ ಕೇಳಿ ಆಘಾತಗೊಂಡ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಈ ಆರೋಪಗಳು ನಿಜವೇ ಎಂದು ದೃಢಪಡಿಸಿಕೊಳ್ಳುವ ಸಲುವಾಗಿ ಮನಃಶಾಸ್ತ್ರಜ್ಞರಿಂದ ಕೌನ್ಸಿಲಿಂಗ್ ಮಾಡಿಸಿದ್ದಾರೆ. ಇದು ಅಪರೂಪದ ಪ್ರಕರಣ ಎಂಬ ಕಾರಣದಿಂದ ಪೊಲೀಸ್ ವರಿಷ್ಠಾಧಿಯವರಿಗೆ ಮಾಹಿತಿ ನೀಡಿ ತನಿಖೆಯ ಮೇಲೆ ನಿಗಾ ಇಡುವಂತೆ ಮನವಿ ಮಾಡಿಕೊಂಡಿದ್ದಾಗಿ ಅವರು ಹೇಳಿದ್ದಾರೆ.
ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೊಕ್ಸೋ ಕಾಯ್ದೆ ಸೇರಿದಂತೆ ಪ್ರಕರಣಗಳು ದಾಖಲಾಗಿವೆ. ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…