ದೇಶ- ವಿದೇಶ

ಯುವತಿ ಮೇಲೆ 60 ಮಂದಿಯಿಂದ 5 ವರ್ಷ ನಿರಂತರ ಅತ್ಯಾಚಾರ; ಭೀಭತ್ಸ ಘಟನೆ ಬಿಚ್ಚಿಟ್ಟ ಸಂತ್ರಸ್ತೆ!

ಕೇರಳ: 5 ವರ್ಷಗಳಿಂದ ತನ್ನ ಮೇಲೆ 64 ಮಂದಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿಯೊಬ್ಬಳು ಆರೋಪಿಸಿರುವುದು ಕೇರಳಾದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ.

ಸಂತ್ರಸ್ತ ಯುವತಿಯು ಕೇರಳದ ಪತ್ತನಂತಿಟ್ಟದವರಾಗಿದ್ದಾರೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಗೆ ಮಾಹಿತಿ ನೀಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯನ್ನು ಸಿಡಬ್ಲ್ಯುಸಿ(ಮಕ್ಕಳ ಕಲ್ಯಾಣ ಸಮಿತಿ) ಮತ್ತು ಮನಶಾಸ್ತ್ರಜ್ಞರ ಜೊತೆಗೂ ಸಮಾಲೋಚನೆ ನಡೆಸಿದ್ದಾರೆ. ನನಗೆ 13 ವರ್ಷವಾಗಿದ್ದ ವೇಳೆ ಈ ಕಹಿ ಅನುಭವವಾಯಿತು. ಪುರುಷನೊಬ್ಬ ನನಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಆಗ ನನ್ನ ವಯಸ್ಸು 18 ಎಂದು ಬಹಿರಂಗಪಡಿಸಿದಳು.

ನಾನು ಶಾಲೆಗೆ ಓದುತ್ತಿದ್ದ ವೇಳೆ ಕಹಿ ಅನುಭವಗಳು ಆದವು. ಕ್ರೀಡೆಯಲ್ಲಿ ಸಕ್ರಿಯವಾಗಿರುವಾಗ ಹುಡುಗರು ಮತ್ತು ತರಬೇತಿದಾರರು ಕೂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಮಿತಿ ಮುಂದೆ ಕೆಲವು ವಿಡಿಯೋಗಳನ್ನು ನೊಂದ ಯುವತಿ ಹಂಚಿಕೊಂಡಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೂ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ ನೊಂದಿರುವ ಯುವತಿಯಿಂದ ಇನ್ನು ಹೆಚ್ಚಿನ ವಿವರಣೆಗಳನ್ನು ಪಡೆಯಲು ಸಿಡಬ್ಲ್ಯುಸಿ ಮುಂದಾಗಿದೆ.

ನೊಂದಿರುವ ಯುವತಿಯ ಜೀವನಕ್ಕೆ ಅಪಾಯವಿದೆ. ಹೀಗಾಗಿ ಅವರಿಗೆ ನಾವು ಅಗತ್ಯವಾದ ಭದ್ರತೆ ಮತ್ತು ಆರೈಕೆಯನ್ನು ನೀಡಲಿದ್ದೇವೆ ಎಂದು ಪಟ್ಟಣಂತಿಟ್ಟ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್.ರಾಜೀವ್ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪೊಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಪಟ್ಟಣಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲುಸ್ತುವಾರಿಯಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಯುವತಿಗೆ ಮೊಬೈಲ್ ಫೋನ್ ಇಲ್ಲದ ಕಾರಣ ತಂದೆಯ ಮೊಬೈಲ್ ಬಳಸುತ್ತಿದ್ದಳು. ಈ ಫೋನ್‍ನಲ್ಲಿ ಯುವತಿ ತನಗೆ ಲೈಂಗಿಕ ಕಿರುಕುಳ ನೀಡಿದ ಸುಮಾರು 40 ಮಂದಿಯ ಹೆಸರು ಹಾಗೂ ದೂರವಾಣಿ ಸಂಖ್ಯೆಗಳನ್ನು ದಾಖಲಿಸಿದ್ದಾಳೆ.

ಯುವತಿಯ ಹೃದಯ ವಿದ್ರಾವಕ ಕಥೆ ಕೇಳಿ ಆಘಾತಗೊಂಡ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಈ ಆರೋಪಗಳು ನಿಜವೇ ಎಂದು ದೃಢಪಡಿಸಿಕೊಳ್ಳುವ ಸಲುವಾಗಿ ಮನಃಶಾಸ್ತ್ರಜ್ಞರಿಂದ ಕೌನ್ಸಿಲಿಂಗ್ ಮಾಡಿಸಿದ್ದಾರೆ. ಇದು ಅಪರೂಪದ ಪ್ರಕರಣ ಎಂಬ ಕಾರಣದಿಂದ ಪೊಲೀಸ್ ವರಿಷ್ಠಾಧಿಯವರಿಗೆ ಮಾಹಿತಿ ನೀಡಿ ತನಿಖೆಯ ಮೇಲೆ ನಿಗಾ ಇಡುವಂತೆ ಮನವಿ ಮಾಡಿಕೊಂಡಿದ್ದಾಗಿ ಅವರು ಹೇಳಿದ್ದಾರೆ.

ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೊಕ್ಸೋ ಕಾಯ್ದೆ ಸೇರಿದಂತೆ ಪ್ರಕರಣಗಳು ದಾಖಲಾಗಿವೆ. ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

5 mins ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

35 mins ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

45 mins ago

ಗೋ ಬ್ಯಾಕ್‌ ಗವರ್ನರ್‌ ಅನ್ನೋದು ರಾಜಕೀಯ ನಾಟಕ : ಎಚ್‌.ಡಿ.ಕುಮಾರಸ್ವಾಮಿ ಆರೋಪ

ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…

55 mins ago

ಫೆ.1ರಂದು ನಿಮಿಷಾಂಬದಲ್ಲಿ ಮಾಘ ಶುದ್ಧ ಪೌರ್ಣಮಿ : ನದಿಯ ತೀರದಲ್ಲಿ ಸೂಕ್ತ ಭದ್ರತೆಗೆ ಶಾಸಕರ ಸೂಚನೆ

ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…

1 hour ago

ಇಂಧನ ಯೋಜನೆಗಳ ಭೂ ಪರಿವರ್ತನೆ ಇನ್ಮುಂದೆ ಆಟೋಮ್ಯಾಟಿಕ್

ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…

2 hours ago