ದೇಶ- ವಿದೇಶ

ಯುವತಿ ಮೇಲೆ 60 ಮಂದಿಯಿಂದ 5 ವರ್ಷ ನಿರಂತರ ಅತ್ಯಾಚಾರ; ಭೀಭತ್ಸ ಘಟನೆ ಬಿಚ್ಚಿಟ್ಟ ಸಂತ್ರಸ್ತೆ!

ಕೇರಳ: 5 ವರ್ಷಗಳಿಂದ ತನ್ನ ಮೇಲೆ 64 ಮಂದಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿಯೊಬ್ಬಳು ಆರೋಪಿಸಿರುವುದು ಕೇರಳಾದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ.

ಸಂತ್ರಸ್ತ ಯುವತಿಯು ಕೇರಳದ ಪತ್ತನಂತಿಟ್ಟದವರಾಗಿದ್ದಾರೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಗೆ ಮಾಹಿತಿ ನೀಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯನ್ನು ಸಿಡಬ್ಲ್ಯುಸಿ(ಮಕ್ಕಳ ಕಲ್ಯಾಣ ಸಮಿತಿ) ಮತ್ತು ಮನಶಾಸ್ತ್ರಜ್ಞರ ಜೊತೆಗೂ ಸಮಾಲೋಚನೆ ನಡೆಸಿದ್ದಾರೆ. ನನಗೆ 13 ವರ್ಷವಾಗಿದ್ದ ವೇಳೆ ಈ ಕಹಿ ಅನುಭವವಾಯಿತು. ಪುರುಷನೊಬ್ಬ ನನಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಆಗ ನನ್ನ ವಯಸ್ಸು 18 ಎಂದು ಬಹಿರಂಗಪಡಿಸಿದಳು.

ನಾನು ಶಾಲೆಗೆ ಓದುತ್ತಿದ್ದ ವೇಳೆ ಕಹಿ ಅನುಭವಗಳು ಆದವು. ಕ್ರೀಡೆಯಲ್ಲಿ ಸಕ್ರಿಯವಾಗಿರುವಾಗ ಹುಡುಗರು ಮತ್ತು ತರಬೇತಿದಾರರು ಕೂಡ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಮಿತಿ ಮುಂದೆ ಕೆಲವು ವಿಡಿಯೋಗಳನ್ನು ನೊಂದ ಯುವತಿ ಹಂಚಿಕೊಂಡಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೂ 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೆ ನೊಂದಿರುವ ಯುವತಿಯಿಂದ ಇನ್ನು ಹೆಚ್ಚಿನ ವಿವರಣೆಗಳನ್ನು ಪಡೆಯಲು ಸಿಡಬ್ಲ್ಯುಸಿ ಮುಂದಾಗಿದೆ.

ನೊಂದಿರುವ ಯುವತಿಯ ಜೀವನಕ್ಕೆ ಅಪಾಯವಿದೆ. ಹೀಗಾಗಿ ಅವರಿಗೆ ನಾವು ಅಗತ್ಯವಾದ ಭದ್ರತೆ ಮತ್ತು ಆರೈಕೆಯನ್ನು ನೀಡಲಿದ್ದೇವೆ ಎಂದು ಪಟ್ಟಣಂತಿಟ್ಟ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎನ್.ರಾಜೀವ್ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪೊಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ಪಟ್ಟಣಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರ ಮೇಲುಸ್ತುವಾರಿಯಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಯುವತಿಗೆ ಮೊಬೈಲ್ ಫೋನ್ ಇಲ್ಲದ ಕಾರಣ ತಂದೆಯ ಮೊಬೈಲ್ ಬಳಸುತ್ತಿದ್ದಳು. ಈ ಫೋನ್‍ನಲ್ಲಿ ಯುವತಿ ತನಗೆ ಲೈಂಗಿಕ ಕಿರುಕುಳ ನೀಡಿದ ಸುಮಾರು 40 ಮಂದಿಯ ಹೆಸರು ಹಾಗೂ ದೂರವಾಣಿ ಸಂಖ್ಯೆಗಳನ್ನು ದಾಖಲಿಸಿದ್ದಾಳೆ.

ಯುವತಿಯ ಹೃದಯ ವಿದ್ರಾವಕ ಕಥೆ ಕೇಳಿ ಆಘಾತಗೊಂಡ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಈ ಆರೋಪಗಳು ನಿಜವೇ ಎಂದು ದೃಢಪಡಿಸಿಕೊಳ್ಳುವ ಸಲುವಾಗಿ ಮನಃಶಾಸ್ತ್ರಜ್ಞರಿಂದ ಕೌನ್ಸಿಲಿಂಗ್ ಮಾಡಿಸಿದ್ದಾರೆ. ಇದು ಅಪರೂಪದ ಪ್ರಕರಣ ಎಂಬ ಕಾರಣದಿಂದ ಪೊಲೀಸ್ ವರಿಷ್ಠಾಧಿಯವರಿಗೆ ಮಾಹಿತಿ ನೀಡಿ ತನಿಖೆಯ ಮೇಲೆ ನಿಗಾ ಇಡುವಂತೆ ಮನವಿ ಮಾಡಿಕೊಂಡಿದ್ದಾಗಿ ಅವರು ಹೇಳಿದ್ದಾರೆ.

ಸದ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪೊಕ್ಸೋ ಕಾಯ್ದೆ ಸೇರಿದಂತೆ ಪ್ರಕರಣಗಳು ದಾಖಲಾಗಿವೆ. ಪತ್ತನಂತಿಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥರು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

20 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

54 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

4 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

4 hours ago