ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್ ರ್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ತ್ರಿವರ್ಣ ಧ್ವಜ ಹೊಂದಿದ ನೂರಾರು ಬೈಕ್ಗಳಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಸಿರು ನಿಶಾನೆ ತೋರಿದರು.
ಈ ವೇಳೆ ಮಾತನಾಡಿದ ಪೃಥ್ವಿ ರೆಡ್ಡಿ, “ಅವ್ಯಾಹತವಾಗಿ ನಡೆಯುತ್ತಿರುವ ಬಿಜೆಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಸರ್ಕಾರದ ಬೊಕ್ಕಸದಿಂದ ಸಾವಿರಾರು ಕೋಟಿ ರೂಪಾಯಿ ಬಿಡುಗಡೆಯಾದರೂ ಜನರ ಸಮಸ್ಯೆಗಳು ಮಾತ್ರ ಹಾಗೆಯೇ ಉಳಿದಿವೆ. ಜನರ ತೆರಿಗೆ ಹಣವು ಜನಪ್ರತಿನಿಧಿಗಳ ಜೇಬು ಸೇರಿ ಅವರು ಮಾತ್ರ ಅಭಿವೃದ್ಧಿ ಹೊಂದುತ್ತಿದ್ದಾರೆ. ಬೆಂಗಳೂರಿನ ಜನತೆಯು ಈ ಭ್ರಷ್ಟ ವ್ಯವಸ್ಥೆಗೆ ಬದಲಾವಣೆ ತರುವ ಸಂಕಲ್ಪ ಮಾಡುವ ಸಮಯ ಬಂದಿದೆ” ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾತನಾಡಿ, “ಇಂದು ಆರಂಭವಾದ ಬೈಕ್ ರ್ಯಾಲಿಯು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ತಲುಪಲಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನದ ತನಕ ರ್ಯಾಲಿ ಮುಂದುವರಿಯಲಿದೆ. ಅಂದು ಬನಪ್ಪ ಪಾರ್ಕ್ನಲ್ಲಿ ಕಾರ್ಯಕ್ರಮ ನಡೆಸಿ ರ್ಯಾಲಿಯನ್ನು ಅಂತ್ಯಗೊಳಿಸಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ವಿರುದ್ಧ ಈ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಸರ್ಕಾರಿ ಕಚೇರಿಗಳಲ್ಲಿ ಸಣ್ಣ ಸೇವೆ ಪಡೆಯಲು ಕೂಡ ಲಂಚ ನೀಡಬೇಕಾದಂತಹ ವಾತಾವರಣವನ್ನು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ನಿರ್ಮಿಸಿವೆ. ರಸ್ತೆಗಳಲ್ಲಿ ಗುಂಡಿಗಳು, ಅಸಮರ್ಪಕ ಪಾದಚಾರಿ ಮಾರ್ಗಗಳು, ಅವ್ಯವಸ್ಥಿತ ಕಸ ವಿಲೇವಾರಿ, ಮೂಲ ಸೌಕರ್ಯಗಳಿಲ್ಲದ ಆರೋಗ್ಯ ಕೇಂದ್ರಗಳು, ನಿರ್ಲಕ್ಷ್ಯಕೊಳಗಾದ ಸರ್ಕಾರಿ ಶಾಲೆಗಳು, ರಾಜಕಾಲುವೆ ಒತ್ತುವರಿ ಮುಂತಾದ ಅನೇಕ ಸಮಸ್ಯೆಗಳು ಬೆಂಗಳೂರನ್ನು ಕಾಡುತ್ತಿದ್ದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಜನತೆಗೆ ಸೂಕ್ತ ಮೂಲಸೌಕರ್ಯಗಳು ದೊರೆಯದಿರುವುದು ದುರಂತ” ಎಂದು ಹೇಳಿದರು.
ಪಕ್ಷದ ಹಲವು ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…