ದೇಶ- ವಿದೇಶ

ಬಿಜೆಪಿ ಸೇರಿದ ಆಮ್‌ ಆದ್ಮಿ ಪಕ್ಷದ 8 ಮಂದಿ ನಿರ್ಗಮಿತ ಶಾಸಕರು

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಆಮ್‌ ಆದ್ಮಿ ಪಕ್ಷಕ್ಕೆ ದೊಡ್ಡ ಶಾಕ್‌ ಎದುರಾಗಿದೆ.

ಮೊನ್ನೆಯಷ್ಟೇ ಎಎಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಎಂಟು ಮಂದಿ ಶಾಸಕರು ಶನಿವಾರ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಸಿಗದಿದ್ದಕ್ಕೆ ಕೋಪಗೊಂಡು ರಾಜೀನಾಮೆ ನೀಡಿದ್ದ ಎಂಟು ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದು, ಇದೀಗ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.

ನರೇಶ್‌ ಯಾದವ್‌, ರೋಹಿತ್‌ ಕುಮಾರ್‌, ರಾಜೇಶ್‌ ರಿಷಿ, ಮದನ್‌ ಲಾಲ್‌, ಪವನ್‌ ಶರ್ಮಾ, ಭಾವನಾ ಗೌಡ್‌, ಬಿ.ಎಸ್.ಜೂನ್‌ ಮತ್ತು ಗಿರೀಶ್‌ ಸೋನಿ ಬಿಜೆಪಿ ಸೇರ್ಪಡೆಯಾಗಿದ್ದು, ಮತ್ತೆ ಸಿಎಂ ಆಗುವ ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ಶಾಕ್‌ ಎದುರಾಗಿದೆ.

ದೆಹಲಿ ಬಿಜೆಪಿಯ ಉಸ್ತುವಾರಿ ಬೈಜಯಂತ್‌ ಪಾಂಡಾ ಮತ್ತು ರಾಜ್ಯಾಧ್ಯಕ್ಷ ವಿರೇಂದ್ರ ಸಚ್‌ದೇವ ಅವರ ಸಮ್ಮುಖದಲ್ಲೇ ಬಿಜೆಪಿ ಸೇರ್ಪಡೆಯಾಗಿದ್ದು, ಅರವಿಂದ್‌ ಕೇಜ್ರಿವಾಲ್‌ಗೆ ಟಕ್ಕರ್‌ ಕೊಡಲು ಮುಂದಾಗಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂಟು ಮಂದಿ ಶಾಸಕರು, ಅರವಿಂದ್‌ ಕೇಜ್ರಿವಾಲ್‌ ಅವರ ನಿರ್ಧಾರದ ವಿರುದ್ಧ ಕಿಡಿಕಾರಿದ್ದು, ಎಎಪಿ ಭ್ರಷ್ಟಾಚಾರ-ಮುಕ್ತ ಆಡಳಿತ ಮತ್ತು ಪಾರದರ್ಶಕತೆಯ ತತ್ವಗಳಿಗೆ ದ್ರೋಹ ಬಗೆದಿದೆ. ಪಕ್ಷವು ಸ್ವಜನ ಪಕ್ಷಪಾತ ಮತ್ತು ಭ್ರಷ್ಟಾಚಾರದ ಕೊಳಚೆ ಗುಂಡಿಯಾಗಿದೆ ಎಂದು ಟೀಕೆ ಮಾಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಂಗಾಳ-ಕೇರಳದಲ್ಲಿ ಬದಲಾವಣೆಯ ಸುಳಿವು?

ಅಧಿಕಾರ ಹಿಡಿಯಲು ದಿನದ ಇಪ್ಪತ್ನಾಲ್ಕು ಗಂಟೆಯೂ ರಾಜಕೀಯ ಲೆಕ್ಕಾಚಾರ ಹಾಕುವುದರಲ್ಲಿ ನಿಪುಣರೆಂದೇ ಖ್ಯಾತಿ ಪಡೆದಿದ್ದ ಜನತಾದಳದ ಅಗ್ರಗಣ್ಯ ನಾಯಕ ಎಚ್.ಡಿ.…

48 mins ago

ಪೊದೆಗಳ ನಡುವೆ ಮರೆಯಾಗಿರುವ ಚನ್ನಕೇಶವ ದೇವಾಲಯ

ಚಿತ್ರಾ ವೆಂಕಟರಾಜು ಪಿರಿಯಾಪಟ್ಟಣದಲ್ಲಿ ಅಷ್ಟು ಪ್ರಸಿದ್ಧಿ ಪಡೆಯದ ಹೊಯ್ಸಳರ ಕಾಲದ ಚನ್ನಕೇಶವ ದೇವಾಲಯವಿದೆ. ಹೊಯ್ಸಳರ ಶೈಲಿಯ ವಾಸ್ತುಶಿಲ್ಪ ದಲ್ಲಿರುವ ಈ…

54 mins ago

ಮಂಗಳಮುಖಿಯರ ‘ಮನೆ ನ್ಯಾಯ!’

ಅಕ್ಷತಾ ತೃತೀಯ ಲಿಂಗಿಗಳ ಮೇಲೆ ದೌರ್ಜನ್ಯ, ಕಿರುಕುಳ, ಅಪಹರಣ ದಂತಹ ಪ್ರಕರಣಗಳು ದಿನೇದಿನೇ ಕೇಳಿ ಬರುತ್ತಿವೆ. ಪ್ರತೀ ಸಲ ಇಂತಹ…

57 mins ago

ನಳಂದ ಅಕಾಡೆಮಿ

ಗೋವಿಂದರಾಜು ದಲಿತ ವಿದ್ಯಾರ್ಥಿಗಳ ಉನ್ನತ ಓದಿಗೆ ಆಸರೆಯಾಗಿರುವ ಅವ್ವ  ಅದು ಉತ್ತರಪ್ರದೇಶದ ಒಂದು ಇಂಜಿನಿಯರಿಂಗ್ ಕಾಲೇಜ್. ಪದವಿ ಕಲಿತು ಬದುಕನ್ನು…

1 hour ago

ಎರಡೇ ದಿನಕ್ಕೆ 168 ಹೆಕ್ಟೇರ್ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಿರುಗಾಳಿ ಮಳೆಗೆ ಕಮರಿದ ರೈತರ ಕನಸು ಗುಂಡ್ಲುಪೇಟೆ: ರೈತರು ಒಂದಷ್ಟು ಕನಸು ಕಟ್ಟಿಕೊಂಡು ಬೆಳೆಸಿ ಕಟಾವಿಗೆ…

1 hour ago

ಭಾರೀ ಗಾಳಿ-ಮಳೆಯಿಂದ ಬೆಳೆ, ಮನೆಗಳಿಗೆ ಹಾನಿ

ಮಂಜು ಕೋಟೆ ಕೋಟೆ: ಅಂದಾಜು ೫ ಕೋಟಿ ರೂ. ನಷ್ಟ; ಕಂಗಾಲಾದ ರೈತರು, ಸಾರ್ವಜನಿಕರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಶುಕ್ರವಾರ ಸಂಜೆ…

1 hour ago