ದೇಶ- ವಿದೇಶ

ಪ್ರಿಯಾಕ್‌ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆ. 12, 2022ರಂದು ಕಲಬುರಗಿಯಲ್ಲಿ ಸುದ್ದ ಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರು ಭಾಗವಹಿಸಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago