ದೇಶ- ವಿದೇಶ

ಪ್ರಿಯಾಕ್‌ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆ. 12, 2022ರಂದು ಕಲಬುರಗಿಯಲ್ಲಿ ಸುದ್ದ ಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರು ಭಾಗವಹಿಸಿದ್ದರು.

andolana

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

4 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

6 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

7 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

7 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

9 hours ago