ದೇಶ- ವಿದೇಶ

ಪ್ರಿಯಾಕ್‌ ಖರ್ಗೆ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು.

ಈ ವೇಳೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆ. 12, 2022ರಂದು ಕಲಬುರಗಿಯಲ್ಲಿ ಸುದ್ದ ಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದರು.

ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರು ಭಾಗವಹಿಸಿದ್ದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

19 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago