ದೇಶ- ವಿದೇಶ

ಎಎಪಿ ಮಹಿಳೆಯರ ವೈಯಕ್ತಿಕ ಮಾಹಿತಿ ಕದಿಯುತ್ತಿದೆ: ಸ್ಮೃತಿ ಇರಾನಿ ಗಂಭೀರ ಆರೋಪ

ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಓಕ್ಲಾ ಮತ್ತು ರೋಹಿಣಿಯಲ್ಲಿ ಚುನಾವಣೆ ನಿಮಿತ್ತ ನಡೆದ ಸಮಾವೇಶಗಳಲ್ಲಿ ಮಾತನಾಡಿದ ಅವರು, ಫೆಬ್ರವರಿ.5ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಗುರುತನ್ನು ಒತ್ತುವ ಮೂಲಕ ಬಿಜೆಪಿ ಪಕ್ಷ ಗೆಲ್ಲಿಸಿ. ಎಎಪಿ ಪಕ್ಷವನ್ನು ದೆಹಲಿಯಿಂದ ಎತ್ತಂಗಡಿ ಮಾಡಬೇಕು ಎಂದು ಮನವಿ ಮಾಡಿದರು.

ಎಎಪಿ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು 2100 ರೂ. ನೀಡುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವ ʼಮಹಿಳಾ ಸಮ್ಮಾನ್‌ ಯೋಜನೆʼ ಯಡಿ ನೋಂದಣಿ ಮಾಡಿಕೊಳ್ಳುವ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕಲೆ ಹಾಕುತ್ತಿದೆ. ಇದು ಸ್ತ್ರೀಯರ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟು ಮಾಡುತ್ತದೆ ಎಂದು ಇರಾನಿ ಆತಂಕ ವ್ಯಕ್ತಪಡಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ. ಆದ ಕಾರಣ ಈ ಬಾರಿ ಎಎಪಿ ಪಕ್ಷವನ್ನು ಸೋಲಿಸಿ ನಮ್ಮ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಚಾರಣಕ್ಕೆ ಹೊಸ ಮಾರ್ಗಸೂಚಿ; ಮೆಚ್ಚುಗೆ

ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…

24 mins ago

ಖಾಸಗಿ ಶಾಲೆಗಳ ಆರ್ಭಟಕ್ಕೆ ಬಾಡಿದ ಸರ್ಕಾರಿ ಶಾಲೆ

ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…

28 mins ago

‘ಅಮೆರಿಕದಲ್ಲಿ ನೆಲೆ ಕಂಡುಕೊಂಡಿರುವ ಮಕ್ಕಳ ಭವಿಷ್ಯದ ಬಗ್ಗೆ ಭಯವಾಗುತ್ತದೆ…’

ಭಾರತದ ಕುರಿತು ಟ್ರಂಪ್ ಅವಹೇಳನಕಾರಿ ಹೇಳಿಕೆಗೆ ಒಂದು ಪ್ರತಿಕ್ರಿಯೆ ನಾನು ಅಮೆರಿಕಕ್ಕೆ ಪ್ರಥಮ ಬಾರಿಗೆ ಕಾಲಿಟ್ಟಿದ್ದು ಮೂರೂವರೆ ದಶಕಗಳಿಗೂ ಹಿಂದೆ.…

35 mins ago

ಕಾವೇರಿ ನದಿಯಲ್ಲಿ ಬರೀ ಬಂಡೆಗಲ್ಲುಗಳ ದರ್ಶನ

ಭೇರ್ಯ ಮಹೇಶ್ ಬಿರುಬಿಸಿಲಿಗೆ ನದಿಯಲ್ಲಿ ಕಡಿಮೆಯಾದ ನೀರಿನ ಹರಿವು; ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಆತಂಕ  ಕೆ.ಆರ್.ನಗರ: ಬಿರುಬಿಸಿಲಿನ ಝಳಕ್ಕೆ ಭತ್ತದ…

43 mins ago

ಮದ್ದೂರಮ್ಮ ಉತ್ಸವ; ಕಳೆಗಟ್ಟಿದ ದನಗಳ ಜಾತ್ರೆ

ಎಂ.ಆರ್.ಚಕ್ರಪಾಣಿ ಜಾತ್ರೆಯಲ್ಲಿ ಹಳ್ಳಿಕಾರ್ ಎತ್ತುಗಳು, ಟಗರುಗಳ ಆಕರ್ಷಣೆ; ಸ್ಥಳವಕಾಶದ ಕೊರತೆಗೆ ರೈತರು ಬೇಸರ ಮದ್ದೂರು: ಪಟ್ಟಣದ ಸರ್ಕಾರಿ ಕ್ರೀಡಾಂಗಣದಲ್ಲಿ ಶನಿವಾರ…

48 mins ago