ದೇಶ- ವಿದೇಶ

ಎಎಪಿ ಮಹಿಳೆಯರ ವೈಯಕ್ತಿಕ ಮಾಹಿತಿ ಕದಿಯುತ್ತಿದೆ: ಸ್ಮೃತಿ ಇರಾನಿ ಗಂಭೀರ ಆರೋಪ

ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಓಕ್ಲಾ ಮತ್ತು ರೋಹಿಣಿಯಲ್ಲಿ ಚುನಾವಣೆ ನಿಮಿತ್ತ ನಡೆದ ಸಮಾವೇಶಗಳಲ್ಲಿ ಮಾತನಾಡಿದ ಅವರು, ಫೆಬ್ರವರಿ.5ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಗುರುತನ್ನು ಒತ್ತುವ ಮೂಲಕ ಬಿಜೆಪಿ ಪಕ್ಷ ಗೆಲ್ಲಿಸಿ. ಎಎಪಿ ಪಕ್ಷವನ್ನು ದೆಹಲಿಯಿಂದ ಎತ್ತಂಗಡಿ ಮಾಡಬೇಕು ಎಂದು ಮನವಿ ಮಾಡಿದರು.

ಎಎಪಿ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು 2100 ರೂ. ನೀಡುವುದಾಗಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವ ʼಮಹಿಳಾ ಸಮ್ಮಾನ್‌ ಯೋಜನೆʼ ಯಡಿ ನೋಂದಣಿ ಮಾಡಿಕೊಳ್ಳುವ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕಲೆ ಹಾಕುತ್ತಿದೆ. ಇದು ಸ್ತ್ರೀಯರ ಸುರಕ್ಷತೆಗೆ ಗಂಭೀರ ಅಪಾಯವನ್ನುಂಟು ಮಾಡುತ್ತದೆ ಎಂದು ಇರಾನಿ ಆತಂಕ ವ್ಯಕ್ತಪಡಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ. ಆದ ಕಾರಣ ಈ ಬಾರಿ ಎಎಪಿ ಪಕ್ಷವನ್ನು ಸೋಲಿಸಿ ನಮ್ಮ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

3 mins ago

ಕೆಸರುಗದ್ದೆ ಕ್ರೀಡಾಕೂಟಕೂಟ: ಕಾಡುತ್ತಿರುವ ಮಳೆ ಕೊರತೆ!

ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…

8 mins ago

ಟಿಎಪಿಸಿಎಂಎಸ್ ಅಧಿಕಾರ ಹಿಡಿಯಲು ತಂತ್ರ-ಪ್ರತಿತಂತ್ರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…

12 mins ago

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

14 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago