ದೇಶ- ವಿದೇಶ

ದೆಹಲಿ ವಿಧಾನಸಭೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಅರವಿಂದ್‌ ಕೇಜ್ರಿವಾಲ್‌ ನಿರ್ಧಾರ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಆಮ್‌ ಆದ್ಮಿ ಪಕ್ಷ ಲೋಕಸಭಾ ಚುನಾವಣೆಯ ಸ್ಪರ್ಧೆಗಿಳಿದಿತ್ತು. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಸೋಲುವ ಮೂಲಕ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಒಂಟಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.

ಇದಕ್ಕೂ ಮುನ್ನ ಆಮ್‌ ಆದ್ಮಿ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದು, ಸ್ವತಂತ್ರ ಸ್ಪರ್ಧೆಯಿಂದ ಮೈತ್ರಿ ಮುರಿದುಕೊಳ್ಳಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು…

13 mins ago

ಸದನದಲ್ಲಿ ಅಗೌರವ ತೋರಿದ ಶಾಸಕರ ವಿರುದ್ಧ ಕ್ರಮ ಆಗಲಿ: ಆರ್.‌ಅಶೋಕ್‌

ಬೆಂಗಳೂರು: ಇಂದು ಕರಾಳ ದಿನ. ಕರಾಳ ರೀತಿಯಲ್ಲಿ ಈ ಅಧಿವೇಶನವನ್ನು ಕಾಂಗ್ರೆಸ್‌ ನಡೆಸಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.…

20 mins ago

ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ…

51 mins ago

ರಾಜ್ಯಪಾಲರು ಮಾಡಿದ 3 ವಾಕ್ಯಗಳ ಭಾಷಣದ ಅಂಶಗಳಿವು.!

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್‌ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…

2 hours ago

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

2 hours ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

3 hours ago