ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡು ಆಮ್ ಆದ್ಮಿ ಪಕ್ಷ ಲೋಕಸಭಾ ಚುನಾವಣೆಯ ಸ್ಪರ್ಧೆಗಿಳಿದಿತ್ತು. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಸೋಲುವ ಮೂಲಕ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಒಂಟಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.
ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದು, ಸ್ವತಂತ್ರ ಸ್ಪರ್ಧೆಯಿಂದ ಮೈತ್ರಿ ಮುರಿದುಕೊಳ್ಳಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…