ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಭಾರತಕ್ಕೆ ಆಗಮಿಸಿದ್ದಾರೆ.
ಭಾರತಕ್ಕೆ ಆಗಮಿಸಿದ ಅಲ್ ನಹ್ಯಾನ್ ಅವರನ್ನು ಸಚಿವ ಪಿಯೂಷ್ ಗೋಯಲ್ ಅವರು ಔಪಚಾರಿಕವಾಗಿ ಸ್ವಾಗತಿಸಿದ್ದಾರೆ.
ಅಬುಧಾಬಿಯ ಯುವರಾಜರಾದ ನಂತರ ಮೊದಲ ಬಾರಿಗೆ ಅಲ್ ನಹ್ಯಾನ್ ಅವರು ಭಾರತಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ದ್ವಿಪಕ್ಷೀಯ ಸಹಕಾರದ ವ್ಯಾಪಕ ವಿಷಯಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹ ಭೇಟಿಯಾಗಲಿದ್ದಾರೆ.
ನಾಳೆ ನಹ್ಯಾನ್ ಅವರು ಮುಂಬೈಗೆ ಭೇಟಿ ನೀಡಲಿದ್ದು, ವ್ಯಾಪಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎರಡೂ ದೇಶಗಳ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗವಹಿಸುವುದು ಅತ್ಯಂತ ವಿಶೇಷವೆನಿಸಿದೆ.
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…
ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…