ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಭಾರತಕ್ಕೆ ಆಗಮಿಸಿದ್ದಾರೆ.
ಭಾರತಕ್ಕೆ ಆಗಮಿಸಿದ ಅಲ್ ನಹ್ಯಾನ್ ಅವರನ್ನು ಸಚಿವ ಪಿಯೂಷ್ ಗೋಯಲ್ ಅವರು ಔಪಚಾರಿಕವಾಗಿ ಸ್ವಾಗತಿಸಿದ್ದಾರೆ.
ಅಬುಧಾಬಿಯ ಯುವರಾಜರಾದ ನಂತರ ಮೊದಲ ಬಾರಿಗೆ ಅಲ್ ನಹ್ಯಾನ್ ಅವರು ಭಾರತಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ದ್ವಿಪಕ್ಷೀಯ ಸಹಕಾರದ ವ್ಯಾಪಕ ವಿಷಯಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹ ಭೇಟಿಯಾಗಲಿದ್ದಾರೆ.
ನಾಳೆ ನಹ್ಯಾನ್ ಅವರು ಮುಂಬೈಗೆ ಭೇಟಿ ನೀಡಲಿದ್ದು, ವ್ಯಾಪಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎರಡೂ ದೇಶಗಳ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗವಹಿಸುವುದು ಅತ್ಯಂತ ವಿಶೇಷವೆನಿಸಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…