ರಾಣಿಪೇಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ಯಾಂಟರ್ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಎಂಬುವವರು ಮೃತಪಟ್ಟಿದ್ದು, ನಲ್ಲೂರು ಗ್ರಾಮದ ಸರಸ್ವತಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರ ಪೈಕಿ ನಾಲ್ವರು ಕೋಲಾರ ಮೂಲದವರು ಎಂಬುದಾಗಿ ತಿಳಿದು ಬಂದಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್ಆರ್ಟಿಸಿ ಬಸ್ನಲ್ಲಿ ತಮಿಳುನಾಡಿನ ಮೇಳ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸ್ಸ ಬರುತ್ತಿದ್ದರು. ಈ ವೇಳೆ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್ಆರ್ಟಿಸಿ ನಡುವೆ ಅಪಘಾತ ಸಂಭವಿಸಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…