ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆದಿದೆ. ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವುದು ಇಲ್ಲಿನ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ.
ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಜತೆ ಲಕ್ಷ್ಮಿಬಾಯಿ ಕಾಲೇಜಿನ ಬಳಿ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:-ಮುಂದಿನ CJI ಆಗಿ ನ್ಯಾ.ಸೂರ್ಯಕಾಂತ್ ನೇಮಕಕ್ಕೆ ಶಿಫಾರಸು ಮಾಡಿದ ಗವಾಯಿ
ಆಕೆ ಮುಖವನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕೈಗಳಿಗೆ ಗಂಭೀರ ಗಾಯಗಳಾಗಿವೆ. ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ. ಬೈಕ್ನಲ್ಲಿ ಬಂದು ಆಸಿಡ್ ಎರಚಿ ಪರಾರಿಯಾದ ಮೂವರು ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…