ದೇಶ- ವಿದೇಶ

ದೇಶಾದ್ಯಂತ ಎಚ್‌ಎಂಟಿ ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ

ಹೈದರಾಬಾದ್: ತೀವ್ರ ಸಂಕಷ್ಟದ ಸ್ಥಿತಿಯಲ್ಲಿರುವ ಇಲ್ಲಿನ ಎಚ್‌ಎಂಟಿ- ಮಶೀನ್ & ಟೂಲ್ಸ್ (HMT MTL) ಘಟಕವೂ ಸೇರಿದಂತೆ ನಗರದಲ್ಲಿರುವ ಕಂಪನಿ ವ್ಯಾಪ್ತಿಯ ಎಲ್ಲಾ ಭೂಮಿಯ ರಕ್ಷಣೆಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕಾರ್ಖಾನೆಗೆ ಭೇಟಿ ನೀಡಿದ ನಂತರ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಜತೆ ಮಾತುಕತೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ನಾನು ಭಾರೀ ಕೈಗಾರಿಕೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ಎಚ್‌ಎಂಟಿ ಬಗ್ಗೆಯೇ ಸರಣಿ ಸಭೆಗಳನ್ನು ನಡೆಸಿದ್ದೇನೆ. ಕರ್ನಾಟಕದ ಬೆಂಗಳೂರು, ಹರಿಯಾಣದ ಪಿಂಜೋರ್ ನಲ್ಲಿರುವ ಘಟಕಗಳಿಗೆ ಭೇಟಿ ನೀಡಿದ್ದೇನೆ. ದೇಶದ ಎಲ್ಲಾ ಕಡೆಯಲ್ಲೂ ಎಚ್‌ಎಂಟಿ ಘಟಕಗಳು ಒಂದೇ ರೀತಿಯ ಸಂಕಷ್ಟ ಎದುರಿಸುತ್ತಿವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅನೇಕ ಕಡೆ ಕಂಪನಿಗೆ ದೊಡ್ಡ ಪ್ರಮಾಣದಲ್ಲಿ ಭೂಮಿ ಇದೆ. ಕೆಲವಡೆ ಅಕ್ರಮ ಒತ್ತುವರಿ ಆಗಿದೆ. ಕಾನೂನು ಕ್ರಮದ ಮೂಲಕ ಒತ್ತುವರಿ ಭೂಮಿಯನ್ನು ವಶಕ್ಕೆ ಪಡೆಯಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.

ಹೈದರಾಬಾದ್ ನಲ್ಲಿರುವ ಹೈದಾರಾಬಾದ್ ನಲ್ಲಿರುವ ಎಚ್‌ಎಂಟಿ- ಮಶೀನ್ & ಟೂಲ್ಸ್ (HMT MTL) ಘಟಕ ಕೆಲ ವರ್ಷಗಳ ಹಿಂದೆ ಉತ್ತಮ ಸ್ಥಿತಿಯಲ್ಲಿತ್ತು. ಇಸ್ರೋ, ಸೇನೆ ಸೇರಿದಂತೆ ವಿವಿಧ ವಲಯಗಳ ಬೇಡಿಕೆಗಳಿಗೆ ತಕ್ಕಂತೆ ವಿಸ್ತೃತವಾಗಿ ಉತ್ಪಾದನೆ ಮಾಡುತ್ತಿತ್ತು. ಹಲವು ಕಾರಣಗಳಿಂದಾಗಿ ಅದು ಸಂಕಷ್ಟಕ್ಕೆ ಸಿಲುಕಿದೆ. ಅದಕ್ಕೆ ಮರುಜನ್ಮ ನೀಡುವ ಬಗ್ಗೆ ಮುಕ್ತವಾಗಿ ಚಿಂತನೆ ನಡೆಸಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಕಲ್ಪನೆಯ ಅಡಿಯಲ್ಲಿ ಮಾರ್ಗೋಪಾಯ ಹುಡುಕಲಾಗುವುದು ಎಂದು ಅವರು ಹೇಳಿದರು.

ಇಡೀ ಕಾರ್ಖಾನೆಯನ್ನು ವೀಕ್ಷಿಸಿದ ಕೇಂದ್ರ ಸಚಿವರು ಈ ಸಂದರ್ಭದಲ್ಲಿ ಹಾಲಿ, ನಿವೃತ್ತ ಕಾರ್ಮಿಕರ ಜತೆ ಸಂವಾದ ನಡೆಸಿದರು. ಬಳಿಕ ಆಡಳಿತ ಮಂಡಳಿಯ ಸಭೆ ನಡೆಸಿದರು.

ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ರಾಜ್ಯ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮ, ಕಂಪನಿಯ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಘಟಕದ ಮುಖ್ಯಸ್ಥ ರಾಜಬಾಬು ಸೇರಿ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

13 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

37 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

57 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago