ದೇಶ- ವಿದೇಶ

ನಟ ಮಿಥುನ್‌ ಚಕ್ರವರ್ತಿಗೆ ಒಲಿದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

ಮುಂಬೈ: ಬಾಲಿವುಡ್‌ ಹಿರಿಯ ನಟ ಮಿಥುನ್‌ ಚಕ್ರವರ್ತಿ ಅವರನ್ನು(74) ʻದಾದಾಸಾಹೇಬ್‌ ಫಾಲ್ಕೆʼ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

ಈ ಬಗ್ಗೆ ಸೋಮವಾರ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಿನಿಮಾ ಕ್ಷೇತ್ರಕ್ಕೆ ಮಿಥುನ್‌ ಅವರು ನೀಡಿರುವ ಕೊಡುಗೆ ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿದೆ. ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಅವರು ಆಯ್ಕೆಯಾಗಿರುವುದು ಸಂತಸದ ವಿಚಾರ ಎಂದು ಬರೆದುಕೊಂಡಿದ್ದಾರೆ.

ಈ ಪ್ರಶಸ್ತಿಯನ್ನು ಅ.8 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಿಥುನ್‌ ಚಕ್ರವರ್ತಿಗೆ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ.

1976ರ ತಮ್ಮ ಚೊಚ್ಚಲ ಸಿನಿಮಾ ಮೃಗಯಾ ಚಿತ್ರದ ಮೂಲಕ ಸಿನಿಮಾ ರಂಗ ಬಂದ ಮಿಥುನ್‌, ಈ ಚಿತ್ರದ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದರು.

ಕಮಾಂಡೋ, ಕಸಂ ಪೈಡಾ ಕರ್ನೆ ವಾಲೆ ಕಿ, ಸುರಕ್ಷಾ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಮಿಥುನ್‌ ಚಕ್ರವರ್ತಿ ನಟಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

3 hours ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

3 hours ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

3 hours ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

3 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

3 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

3 hours ago