ದೇಶ- ವಿದೇಶ

ಬದರೀನಾಥ ದೇವಾಲಯಕ್ಕೆ ನಟ ರಜಿನಿಕಾಂತ್‌ ಭೇಟಿ

ಬದರೀನಾಥ: ಉತ್ತರಾಖಂಡದ ಇತಿಹಾಸ ಪ್ರಸಿದ್ಧ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ದೇಗುಲಕ್ಕೆ ಆಗಮಿಸಿದ ನಟನನ್ನು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರಮಾಡಿಕೊಂಡು ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ನೀಡಿದರು.

ಚಳಿಗಾಲದ ಹಿನ್ನೆಲೆಯಲ್ಲಿ ಬದರಿನಾಥ ದೇಗುಲದ ಬಾಗಿಲುಗಳನ್ನು ಕೆಲ ದಿನಗಳಲ್ಲಿ ಮುಚ್ಚಲಾಗುತ್ತಿದ್ದು, ಅದಕ್ಕೂ ಮುನ್ನವೇ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬದರಿನಾಥನ ದರ್ಶನ ಪಡೆದುಕೊಂಡಿದ್ದಾರೆ.

ಇದನ್ನು ಓದಿ : ʼಜೈಲರ್‌’ ಯಶಸ್ಸು: ನಿರ್ಮಾಪಕರಿಂದ ರಜಿನಿಕಾಂತ್‌, ನೆಲ್ಸನ್‌ಗೆ ದುಬಾರಿ ಕಾರು ಉಡುಗೊರೆ

ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಭಾರತದ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಿರುವ ತಲೈವರ್ ಕಳೆದ ಶನಿವಾರ ಋಷಿಕೇಶದ ಗಂಗಾ ನದಿಯ ದಡದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.

ಮಾತ್ರವಲ್ಲ ಅವರು ತಮ್ಮ ಪ್ರವಾಸದ ವೇಳೆ ಸಾಮಾನ್ಯ ಮನುಷ್ಯರಂತೆ ರಸ್ತೆ ಬದಿಯ ಹೋಟೆಲ್‍ನಲ್ಲಿ ಊಟ ಸೇವಿಸಿ ಗಮನ ಸೆಳೆದಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago