ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ವಿರುದ್ಧ ಚಾಕು ಇರಿತ ದಾಳಿ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಥಾಣೆಯಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿ ಎಂದು ಎಎನ್ಐ ವರದಿ ನೀಡಿದೆ.
ಮುಂಬೈ ಪೊಲೀಸರು ಇಂದು(ಜನವರಿ.19) ಥಾಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಮುಂಬೈ ಪೊಲೀಸ್ ಇಲಾಖೆಯ ಡಿಸಿಪಿ ಅವರು, ದಟ್ಟ ಪೊದೆಗಳ ಮಧ್ಯದಲ್ಲಿ ಒಣಹುಲ್ಲಿನ ಅಡಿಯಲ್ಲಿ ನಿದ್ದೆ ಮಾಡುತ್ತಿದ್ದ ಸ್ಥಿತಿಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ. ಅಲ್ಲದೇ ಆರೋಪಿಯೂ ಈ ಮೊದಲು ಇಲ್ಲಿ ಕೆಲಸ ಮಾಡುತ್ತಿದ್ದ, ಆದ್ದರಿಂದ ಈ ಸ್ಥಳದ ಅರಿವು ಆತನಿಗೆ ಇದು, ತಪ್ಪಿಸಿಕೊಳ್ಳುವ ಜಾಗವನ್ನು ಸಹ ಕಂಡುಕೊಂಡಿದ್ದ ಎಂದು ಹೇಳಿದ್ದಾರೆ.
ಇನ್ನೂ ಆರೋಪಿಯೂ ಮೊದಲು ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಹೇಳಿಕೊಂಡಿದ್ದು, ನಂತರ ಮೊಹಮ್ಮದ್ ಸಜ್ಜಾದ್ ಎಂದು ಹೇಳಿಕೊಂಡಿದ್ದಾನೆ. ಹೀಗಾಗಿ ಪೊಲೀಸರು ಆತನ ಗುರುತನ್ನು ದೃಢಪಡಿಸುವ ಸಲುವಾಗಿ ಹೆಚ್ಚಿನ ತನಿಖೆಗಾಗಿ ಆತನನ್ನು ಮುಂಬೈಗೆ ಕರೆ ತರಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…