ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ವಿರುದ್ಧ ಚಾಕು ಇರಿತ ದಾಳಿ ನಡೆಸಿದ ಆರೋಪಿಯನ್ನು ಮುಂಬೈ ಪೊಲೀಸರು ಇಂದು ಥಾಣೆಯಲ್ಲಿ ಬಂಧಿಸಿದ್ದಾರೆ ಎಂದು ಮೂಲಗಳು ಉಲ್ಲೇಖಿಸಿ ಎಂದು ಎಎನ್ಐ ವರದಿ ನೀಡಿದೆ.
ಮುಂಬೈ ಪೊಲೀಸರು ಇಂದು(ಜನವರಿ.19) ಥಾಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಮುಂಬೈ ಪೊಲೀಸ್ ಇಲಾಖೆಯ ಡಿಸಿಪಿ ಅವರು, ದಟ್ಟ ಪೊದೆಗಳ ಮಧ್ಯದಲ್ಲಿ ಒಣಹುಲ್ಲಿನ ಅಡಿಯಲ್ಲಿ ನಿದ್ದೆ ಮಾಡುತ್ತಿದ್ದ ಸ್ಥಿತಿಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ. ಅಲ್ಲದೇ ಆರೋಪಿಯೂ ಈ ಮೊದಲು ಇಲ್ಲಿ ಕೆಲಸ ಮಾಡುತ್ತಿದ್ದ, ಆದ್ದರಿಂದ ಈ ಸ್ಥಳದ ಅರಿವು ಆತನಿಗೆ ಇದು, ತಪ್ಪಿಸಿಕೊಳ್ಳುವ ಜಾಗವನ್ನು ಸಹ ಕಂಡುಕೊಂಡಿದ್ದ ಎಂದು ಹೇಳಿದ್ದಾರೆ.
ಇನ್ನೂ ಆರೋಪಿಯೂ ಮೊದಲು ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಹೇಳಿಕೊಂಡಿದ್ದು, ನಂತರ ಮೊಹಮ್ಮದ್ ಸಜ್ಜಾದ್ ಎಂದು ಹೇಳಿಕೊಂಡಿದ್ದಾನೆ. ಹೀಗಾಗಿ ಪೊಲೀಸರು ಆತನ ಗುರುತನ್ನು ದೃಢಪಡಿಸುವ ಸಲುವಾಗಿ ಹೆಚ್ಚಿನ ತನಿಖೆಗಾಗಿ ಆತನನ್ನು ಮುಂಬೈಗೆ ಕರೆ ತರಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…