ಮುಂಬೈ: ದುಬೈನಿಂದ ಭಾರತಕ್ಕೆ ಚಿನ್ನವನ್ನು ಕಳ್ಳ ಸಾಗಾಣೆ ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದ ಅಫ್ಘಾನಿಸ್ತಾನದ ಕಾನ್ಸುಲ್ ಜನರಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಸುಮಾರು 18 ಕೋಟಿ ಬೆಲೆಬಾಳುವ 25 ಕೆಜಿ ಚಿನ್ನವನ್ನು ಅಫ್ಘಾನ್ ರಾಯಭಾರಿ ಝಕಿಯಾ ವಾರ್ಡಕ್ ಅವರು ದುಬೈನಿಂದ ಭಾರತಕ್ಕೆ ಕಳ್ಳ ಸಾಗಾಣೆ ಮೂಲಕ ತರಲು ಪ್ರಯತ್ನಿಸಿದ್ದರು. ಈ ಘಟನೆ ಬಳಿಕ ಮಾತನಾಡಿರುವ ಅವರು, ಇದೊಂದು ವಯಕ್ತಿಕ ದಾಳಿ ಹಾಗೂ ಮಾನನಷ್ಟವಾಗಿದೆ. ಈ ವ್ಯವಸ್ಥೆಯೊಳಗಿನ ಏಕೈಕ ಮಹಿಳಾ ಪ್ರತಿನಿಧಿಯನ್ನು ಅನ್ಯಾಯವಾಗಿ ಗುರಿಯಾಗಿಸುವ ಉದ್ದೇಶವಾಗಿದೆ ಎಂದು ದೂರಿದ್ದಾರೆ.
ವಾರ್ಡಕ್ ಅವರು ತಮ್ಮ ಪುತ್ರನೊಂದಿಗೆ ದುಬೈನಿಂದ ಭಾರತಕ್ಕೆ ಆಗಮಿಸುವ ವೇಳೆ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಚಿನ್ನದೊಂದಿಗೆ ತಡೆಯಲಾಗಿತ್ತು. ಅವರು ರಾಜತಾಂತ್ರಿಕ ಅನುಮತಿ ಹೊಂದಿರುವ ಕಾರಣ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತೆ ವಿನಃ ಬಂಧಿಸಲಾಗಿರಲಿಲ್ಲ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…