ದೇಶ- ವಿದೇಶ

ದಿಲ್ಲಿ ಬೆನ್ನಲ್ಲೇ ಪಾಕ್‌ನಲ್ಲೂ ಬಾಂಬ್ ಸ್ಛೋಟ ; 12 ಮಂದಿ ಸಾವು

ಇಸ್ಲಾಮಾಬಾದ್ : ದೆಹಲಿ ಬಾಂಬ್ ಸ್ಛೋಟ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಾಕಿಸ್ತಾನದಲ್ಲೂ ಭೀಕರ ಕಾರ್ ಬಾಂಬ್ ಸ್ಛೋಟ ಸಂಭವಿಸಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ.

ಇಸ್ಲಾಮಾಬಾದ್‌ನ ಜಿಲ್ಲಾ ನ್ಯಾಯಾಲಯದ ಹೊರಗೆ ನಡೆದ ಕಾರು ಸ್ಛೋಟದಲ್ಲಿ 12 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ನ್ಯಾಯಾಲಯಕ್ಕೆ ಆಗಮಿಸಿದ್ದವರು ಅಥವಾ ಪಾದಚಾರಿಗಳು. ಸ್ಛೋಟದಿಂದ ಹಲವಾರು ವಾಹನಗಳಿಗೆ ಹಾನಿಯಾಗಿದ್ದು, ಯಾವುದೇ ಸಂಘಟನೆ ಈ ಘಟನೆಯ ಹೊಣೆ ಹೊತ್ತಿಲ್ಲ. ಪೊಲೀಸರು ಆತ್ಮಹತ್ಯಾ ದಾಳಿ ಇದಾಗಿರಬಹುದು ಎಂದು ಶಂಕಿಸಿದ್ದಾರೆ.

ಇದನ್ನೂ ಓದಿ:-ಸಿದ್ದಾಪುರ | ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಚುರುಕು

ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದರು. ಸ್ಛೋಟ ಶಬ್ದವು ನಗರದಿಂದ ಮೈಲಿಗಳಷ್ಟು ದೂರದವರೆಗೆ ಕೇಳಿಬಂದಿದೆ. ಸ್ಛೋಟದ ತೀವ್ರತೆಗೆ ನ್ಯಾಯಾಲಯದ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳು ಸಹ ಹಾನಿಗೊಳಗಾಗಿವೆ. ನ್ಯಾಯಾಲಯಕ್ಕೆ ಹಾಜರಾಗಿದ್ದವರು ಹಾಗೂ ಪಾದಚಾರಿಗಳು ಮೃತರು ಮತ್ತು ಗಾಯಾಳುಗಳಲ್ಲಿ ಸೇರಿದ್ದಾರೆ. ಗಾಯಗೊಂಡವರ ಪೈಕಿ ಹೆಚ್ಚಿನ ಜನರು ವಕೀಲರು ಮತ್ತು ಕೋರ್ಟ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago