ದೇಶ- ವಿದೇಶ

ಕೃಷಿ ಯಂತ್ರೋಪಕರಣ ಉತ್ಪಾದನೆ; ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.

ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ ಸಚಿವರು ಹೊಸದಾಗಿ ಆವಿಷ್ಕಾರಗೊಂಡಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೃಷಿಯನ್ನು ಸುಸ್ಥಿರ ಹಾಗೂ ಲಾಭದಾಯಕವನ್ನಾಗಿಸಬೇಕಿದೆ. ಶ್ರಮ ಮತ್ತು ವೆಚ್ಚ ಕಡಿತಗೊಳಿಸಿ ಉತ್ಪಾದನೆ ಹೆಚ್ಚಿಸಲು ಇಂತಹ ಆಧುನಿಕ ಯಂತ್ರೋಪಕರಣಗಳ ಬಳಗೆ ಸಹಕಾರಿಯಾಗಲಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ಈ ಕೃಷಿ ಯಂತ್ರೋಪಕರಣಗಳ ಪ್ರದರ್ಶನದಲ್ಲಿ ಕೃಷಿ ಸಚಿವರು ಪ್ರಮುಖವಾಗಿ ರೋಬೋಟಿಕ್ ಟೆಕ್ನಾಲಜಿ, ಕೃತಕ ಬುದ್ಧಿಮತ್ತೆಯಿಂದ ಚಲಿಸಲ್ಪಡುವ ಯಂತ್ರಗಳನ್ನು ಗಮನಿಸಿ ಮಾಹಿತಿ ಪಡೆದರು.

ರಾಜ್ಯದ ವಿಭಿನ್ನ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗುವ ಹಲುವು ಬೆಳೆಗಳ ಬಿತ್ತನೆ , ನಿರ್ವಹಣೆ ಕಟಾವಿಗೂ ನೆರವಾಗುವ ಹೊಸ ಯಂತ್ರಗಳು ಆವಿಷ್ಕಾರ ಗೊಂಡಿರುವುದನ್ನು ಗಮನಿಸಿದ ಸಚಿವರು ಮೆಸ್ಸೆ ಫರ್ಗೂಸನ್, ಜಾನ್ ಡೀರ್,ಕುಬೋಟಾ,
ಅಗ್ರಿ ಏರೋ ಸ್ಪೇಸ್ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.

ಈ ದೊಡ್ಡ ಯಂತ್ರಗಳನ್ನು ಕರ್ನಾಟಕದಲ್ಲಿಯೇ ಉತ್ಪಾದನೆ ಮಾಡಲು ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು .
ಹಾಗಾಗಿ ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಸಚಿವ ಎನ್ ಚಲುವರಾಯಸ್ವಾಮಿ ಉದ್ಯಮಿಗಳನ್ನು ಆಹ್ವಾನಿಸಿದರು.

ಇದರ ಜೊತೆಗೆ ಕೃಷಿ ಸಚಿವರು ಬಿಡುವು ಮಾಡಿಕೊಂಡು ಅಮೇರಿಕಾದ ಕೃಷಿ ಕ್ಷೇತ್ರಗಳಿಗೂ ಭೇಟಿ ನೀಡಿ ಅಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನಗಳನ್ನು ಪರಿಶೀಲಿಸಿದರು.

ಕೃಷಿ ಇಲಾಖೆ ಕಾರ್ಯದರ್ಶಿ ವಿ ಅನ್ಬುಕುಮಾರ್, ಅಪರ ಕೃಷಿ ನಿರ್ದೇಶಕರಾದ ವೆಂಕಟ ರಮಣ ರೆಡ್ಡಿ,ಕೆಪೆಕ್ ಅಧ್ಯಕ್ಷರಾದ ಹರೀಶ್ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಬಂಥನಾಳ್ ,ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸಚಿವರೊಂದಿಗೆ ಕೃಷಿ ಯಂತ್ರೋಪಕರಣ ಪ್ರದರ್ಶನ ಮೇಳದಲ್ಲಿ ಭಾಗವಹಿಸಿದ್ದರು.

ಬೃಹತ್ ವಸ್ತು ಪ್ರದರ್ಶನ
ಅಮೇರಿಕಾ ದೇಶದ ಅಯೋವಾ ಪ್ರಾತ್ಯದ ಬೊನೆ ನಗರದಲ್ಲಿ ಏರ್ಪಡಿಸಿರುವ ಕೃಷಿ ಅಭಿವೃದ್ಧಿ ಪ್ರದರ್ಶನ ಅಮೇರಿಕಾದಲ್ಲಿ ನಡೆಯುವ ವಿಶ್ವದ ಅತೀ ದೊಡ್ಡ ಕೃಷಿ ಪ್ರದರ್ಶನಗಳಲ್ಲಿ ಒಂದಾಗಿದೆ.

ವಿಶ್ವದ ಅನೇಕ ಕೃಷಿ ಯಂತ್ರೋಪಕರಣಗಳ ಉತ್ಪಾದನಾ ಸಂಸ್ಥೆಗಳು ಇದರಲ್ಲಿ ಭಾಗವಹಿಸುತ್ತವೆ .ಪ್ರತಿ ವರ್ಷ ಹೊಸ ಆವಿಷ್ಕಾರಗಳು ಇಲ್ಲಿ ಪರಿಚಯಿಸಲ್ಪಡುತ್ತವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

5 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago