ದೇಶ- ವಿದೇಶ

ಕೃಷಿ ಯಂತ್ರೋಪಕರಣ ಉತ್ಪಾದನೆ; ರಾಜ್ಯದಲ್ಲಿ ಹೂಡಿಕೆಗೆ ಸಚಿವ ಚಲುವರಾಯಸ್ವಾಮಿ ಆಹ್ವಾನ

ಬೊನೆ , ಅಯೋವಾ( ಅಮೇರಿಕಾ): ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಮೇರಿಕಾದ ಅಯೋವಾ ರಾಜ್ಯದ ಬೊನೆ ನಗರದಲ್ಲಿ ನಡೆಯುತ್ತಿರುವ ಅತ್ಯಾಧುನಿಕ ಕೃಷಿ ಯಂತ್ರಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಿದ್ದು, ರಾಜ್ಯದಲ್ಲಿ ಉತ್ಪಾದನೆ ಹೂಡಿಕೆಗೆ ಆಹ್ವಾನಿಸಿದ್ದಾರೆ.

ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಪ್ರದರ್ಶನ ಮೇಳಕ್ಕೆ ಭೇಟಿ ನೀಡಿರುವ ಸಚಿವರು ಹೊಸದಾಗಿ ಆವಿಷ್ಕಾರಗೊಂಡಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದಲ್ಲಿ ಕೃಷಿಯನ್ನು ಸುಸ್ಥಿರ ಹಾಗೂ ಲಾಭದಾಯಕವನ್ನಾಗಿಸಬೇಕಿದೆ. ಶ್ರಮ ಮತ್ತು ವೆಚ್ಚ ಕಡಿತಗೊಳಿಸಿ ಉತ್ಪಾದನೆ ಹೆಚ್ಚಿಸಲು ಇಂತಹ ಆಧುನಿಕ ಯಂತ್ರೋಪಕರಣಗಳ ಬಳಗೆ ಸಹಕಾರಿಯಾಗಲಿದೆ ಎಂದು ಸಚಿವ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.

ಈ ಕೃಷಿ ಯಂತ್ರೋಪಕರಣಗಳ ಪ್ರದರ್ಶನದಲ್ಲಿ ಕೃಷಿ ಸಚಿವರು ಪ್ರಮುಖವಾಗಿ ರೋಬೋಟಿಕ್ ಟೆಕ್ನಾಲಜಿ, ಕೃತಕ ಬುದ್ಧಿಮತ್ತೆಯಿಂದ ಚಲಿಸಲ್ಪಡುವ ಯಂತ್ರಗಳನ್ನು ಗಮನಿಸಿ ಮಾಹಿತಿ ಪಡೆದರು.

ರಾಜ್ಯದ ವಿಭಿನ್ನ ಭೌಗೋಳಿಕ ಪರಿಸ್ಥಿತಿಗೆ ಅನುಗುಣವಾಗುವ ಹಲುವು ಬೆಳೆಗಳ ಬಿತ್ತನೆ , ನಿರ್ವಹಣೆ ಕಟಾವಿಗೂ ನೆರವಾಗುವ ಹೊಸ ಯಂತ್ರಗಳು ಆವಿಷ್ಕಾರ ಗೊಂಡಿರುವುದನ್ನು ಗಮನಿಸಿದ ಸಚಿವರು ಮೆಸ್ಸೆ ಫರ್ಗೂಸನ್, ಜಾನ್ ಡೀರ್,ಕುಬೋಟಾ,
ಅಗ್ರಿ ಏರೋ ಸ್ಪೇಸ್ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದರು.

ಈ ದೊಡ್ಡ ಯಂತ್ರಗಳನ್ನು ಕರ್ನಾಟಕದಲ್ಲಿಯೇ ಉತ್ಪಾದನೆ ಮಾಡಲು ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು .
ಹಾಗಾಗಿ ರಾಜ್ಯದಲ್ಲೇ ಹೂಡಿಕೆ ಮಾಡುವಂತೆ ಸಚಿವ ಎನ್ ಚಲುವರಾಯಸ್ವಾಮಿ ಉದ್ಯಮಿಗಳನ್ನು ಆಹ್ವಾನಿಸಿದರು.

ಇದರ ಜೊತೆಗೆ ಕೃಷಿ ಸಚಿವರು ಬಿಡುವು ಮಾಡಿಕೊಂಡು ಅಮೇರಿಕಾದ ಕೃಷಿ ಕ್ಷೇತ್ರಗಳಿಗೂ ಭೇಟಿ ನೀಡಿ ಅಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನಗಳನ್ನು ಪರಿಶೀಲಿಸಿದರು.

ಕೃಷಿ ಇಲಾಖೆ ಕಾರ್ಯದರ್ಶಿ ವಿ ಅನ್ಬುಕುಮಾರ್, ಅಪರ ಕೃಷಿ ನಿರ್ದೇಶಕರಾದ ವೆಂಕಟ ರಮಣ ರೆಡ್ಡಿ,ಕೆಪೆಕ್ ಅಧ್ಯಕ್ಷರಾದ ಹರೀಶ್ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕರಾದ ಬಂಥನಾಳ್ ,ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಸಚಿವರೊಂದಿಗೆ ಕೃಷಿ ಯಂತ್ರೋಪಕರಣ ಪ್ರದರ್ಶನ ಮೇಳದಲ್ಲಿ ಭಾಗವಹಿಸಿದ್ದರು.

ಬೃಹತ್ ವಸ್ತು ಪ್ರದರ್ಶನ
ಅಮೇರಿಕಾ ದೇಶದ ಅಯೋವಾ ಪ್ರಾತ್ಯದ ಬೊನೆ ನಗರದಲ್ಲಿ ಏರ್ಪಡಿಸಿರುವ ಕೃಷಿ ಅಭಿವೃದ್ಧಿ ಪ್ರದರ್ಶನ ಅಮೇರಿಕಾದಲ್ಲಿ ನಡೆಯುವ ವಿಶ್ವದ ಅತೀ ದೊಡ್ಡ ಕೃಷಿ ಪ್ರದರ್ಶನಗಳಲ್ಲಿ ಒಂದಾಗಿದೆ.

ವಿಶ್ವದ ಅನೇಕ ಕೃಷಿ ಯಂತ್ರೋಪಕರಣಗಳ ಉತ್ಪಾದನಾ ಸಂಸ್ಥೆಗಳು ಇದರಲ್ಲಿ ಭಾಗವಹಿಸುತ್ತವೆ .ಪ್ರತಿ ವರ್ಷ ಹೊಸ ಆವಿಷ್ಕಾರಗಳು ಇಲ್ಲಿ ಪರಿಚಯಿಸಲ್ಪಡುತ್ತವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

11 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

11 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

11 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

11 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

13 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

14 hours ago